
ಮಡಿಕೇರಿ (ಜೂ.13): ಮುಂದಿನ ಜೆಡಿಎಸ್ ರಾಜ್ಯಾಧ್ಯಕ್ಷರು ಯಾರು ಆಗುತ್ತಾರೆ ಎಂದು ನನಗೆ ತಿಳಿದಿಲ್ಲ. ಆದರೆ, ನಿಖಿಲ್ ಕುಮಾರಸ್ವಾಮಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಮರ್ಥರು, ಇವರೊಂದಿಗೆ ಮಧು ಬಂಗಾರಪ್ಪ, ದತ್ತ ಸೇರಿದಂತೆ ಆನೇಕರು ಆಕಾಂಕ್ಷಿಗಳಿದ್ದಾರೆ ಎಂದು ಜೆಡಿಎಸ್ ಮುಖಂಡ ಎಚ್.ವಿಶ್ವನಾಥ್ ತಿಳಿಸಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಬಗ್ಗೆ ತನಗೆ ಯಾವುದೇ ಅಸಮಾಧಾನ ಇಲ್ಲ. ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆಯೇ ಹೊರತು ಜೆಡಿಎಸ್ ಪಕ್ಷಕ್ಕಲ್ಲ. ಪಕ್ಷದ ಸಿದ್ಧಾಂತದಡಿ ಕೆಲಸ ಮಾಡುತ್ತೇನೆ. ತನ್ನ ರಾಜೀನಾಮೆಯನ್ನು ಅಂಗೀಕರಿಸುವಂತೆ ಮನವೊಲಿಸಿದ್ದೇನೆ. ಆದರೆ ಅವರು ಅಂಗೀಕಾರ ಮಾಡಿಲ್ಲ. ರಾಜೀನಾಮೆ ಸಲ್ಲಿಸಿದ ನಂತರ ಕುಮಾರಸ್ವಾಮಿ ಹಾಗೂ ದೇವೇಗೌಡರು ಮನವೊಲಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.
ಜೆಡಿಎಸ್ ಕೋಟಾದಲ್ಲಿ 2 ಸ್ಥಾನಗಳು ಮಂತ್ರಿ ಮಂಡಲಕ್ಕೆ ಸೇರಿಸಲು ಬಾಕಿ ಇದೆ. ಅದರಲ್ಲಿ ದಲಿತ ಮತ್ತು ಅಲ್ಪಸಂಖ್ಯಾತರಿಗೆ ಸ್ಥಾನ ನೀಡಬೇಕು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.