
ಮುಜಫ್ಫರ್ಪುರ[ಜೂ.15]: ಬಿಹಾರದಲ್ಲಿ ಮಿದುಳಿನ ಉರಿಯೂತ (ಅಕ್ಯೂಟ್ ಎನ್ಸೆಫಲಿಟೀಸ್ ಸಿಂಡ್ರೋಮ್) ಕಾಯಿಲೆಗೆ ಸಾವನ್ನಪ್ಪಿದ ಮಕ್ಕಳ ಸಂಖ್ಯೆ 63ಕ್ಕೆ ಏರಿಕೆಯಾಗಿದೆ.
ಕಳೆದೊಂದು ತಿಂಗಳಿನಿಂದ ರಾಜ್ಯದ ವಿವಿಧ ಭಾಗಗಳನ್ನು ಕಾಡುತ್ತಿರುವ ಸಮಸ್ಯೆ ನಿವಾರಿಸಲು ತಜ್ಞ ವೈದ್ಯರ ತಂಡ ಅವಿರತವಾಗಿ ಶ್ರಮಿಸುತ್ತಿದೆ ಎಂದು ಬಿಹಾರ ಆರೋಗ್ಯ ಸಚಿವ ಮಂಗಲ್ ಪಾಂಡೆ ಹೇಳಿದ್ದಾರೆ. 63 ಮಕ್ಕಳ ಪೈಕಿ 47 ಮಂದಿ ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಉಳಿದ 10 ಮಂದಿ ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ.
ಮಿದುಳಿನ ಊರಿಯೂತ ವೈರಾಣು ಸೋಂಕಿನಿಂದ ಹರಡುವ ಕಾಯಿಲೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.