
ಪಾಟ್ನಾ(ಫೆ.24): ರಸ್ತೆಬದಿ ನಿಂತಿದ್ದ ಶಾಲಾ ವಿದ್ಯಾರ್ಥಿಗಳ ಮೇಲೆ ಕಾರು ಹರಿದ ಪರಿಣಾಮ 9 ಬಾಲಕರು ಮೃತಪಟ್ಟ ಘಟನೆ ಬಿಹಾರದ ಮುಝಾಪುರನಗರದಲ್ಲಿ ನಡೆದಿದೆ.
ಜಿಲ್ಲೆಯ ಮಣಿಪುರ ಬ್ಲಾಕ್'ನ ರಾಷ್ಟ್ರೀಯ ಹೆದ್ದಾರಿ 77ರಲ್ಲಿ ಇಂದು ಸುಮಾರು 1.30 ಗಂಟೆಯ ವೇಳೆ ಶಾಲೆಯಿಂದ ಮನೆಗೆ ತೆರಳಲು ರಸ್ತೆ ಬದಿ ನಿಂತಿದ್ದರು. ಆ ಸಮಯದಲ್ಲಿ ವೇಗವಾಗಿ ಬಂದ ಎಸ್'ಯುವಿ ಕಾರು ನಿಯಂತ್ರಣ ತಪ್ಪಿ ಶಾಲಾ ಬಾಲಕರ ಮೇಲೆ ಹರಿದಿದೆ.
ಮೃತ ವಿದ್ಯಾರ್ಥಿಗಳೆಲ್ಲರೂ ಧರ್ಮಾಪುರ ಮಧ್ಯ ವಿದ್ಯಾಲಯದ ವಿದ್ಯಾರ್ಥಿಗಳಾಗಿದ್ದಾರೆ. ಗಾಯಗೊಂಡ ಹೆಲವು ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆ ಸೇರಿಸಲಾಗಿದೆ. ಘಟನೆಯ ನಂತರ ಆರೋಪಿ ಚಾಲಕ ಕೆಲ ದೂರದಲ್ಲಿ ಕಾರನ್ನು ಬಿಟ್ಟು ಪರಾರಿಯಾಗಿದ್ದಾನೆ. ಮೃತಪಟ್ಟ ಶಾಲಾ ವಿದ್ಯಾರ್ಥಿಗಳೆಲ್ಲರು 7 ರಿಂದ 12 ವರ್ಷದವರಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.