
ತಿರುವನಂತಪುರಂ(ಜೂ.1): ನಿಫಾ ವೈರಸ್ಗೆ ಹೆದರಿ ಆಸ್ಪತ್ರೆ ಸಿಬ್ಬಂದಿಯೇ ರಜೆ ಕೇಳುತ್ತಿರುವ ಘಟನೆ ಕೇರಳದಲ್ಲಿ ನಡೆದಿದೆ. ನಿಫಾ ಸೋಂಕು ತಗುಲಿದವರಿಗೆ ಚಿಕಿತ್ಸೆ ನೀಡುತ್ತಿದ್ದ ಇಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ, ಭೀತಿಗೊಂಡ ಬಲ್ಸರಿಯ ನಾಲ್ವರು ವೈದ್ಯರು ಮತ್ತು ನರ್ಸ್ಗಳು ರಜೆಗಾಗಿ ಮೊರೆ ಇಡುತ್ತಿದ್ದಾರೆ.
ನಿಫಾ ಸೋಂಕಿನಿಂದಾಗಿ ಕೇರಳದ ಉತ್ತರ ಜಿಲ್ಲೆಗಳಲ್ಲಿ ಈವರೆಗೂ 16 ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವೈದ್ಯರು, ನರ್ಸ್ಗಳು ಸೇರಿದರ್ಸ್ ಆಸ್ಪತ್ರೆಯ ಹಲವು ಸಿಬ್ಬಂದಿ ರಜೆ ಹಾಕಿದ್ದಾರೆ. ಆಸ್ಪತ್ರೆಯ ಕಾರ್ಯ ಚಟುವಟಿಕೆ ಸುಗಮವಾಗಿ ಸಾಗಲು ಪರ್ಯಾಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹಿರಿಯ ಆರೋಗ್ಯಾಧಿಕಾರಿಗಳು ಹೇಳಿದ್ದಾರೆ.
ಆಸ್ಪತ್ರೆಯಲ್ಲಿನ ರೋಗಿಗಳ ದಟ್ಟಣೆ ತಡೆಯುವ ಉದ್ದೇಶದಿಂದ ಸ್ಥಳೀಯ ನೌಕರರ ವಿನಿಮಯ ಸೇರಿದಂತೆ ಪ್ರಮುಖ ಸಂಸ್ಥೆಗಳಲ್ಲಿ ವಿಚಾರಣೆ ಮಾಡಲಾಗುತ್ತಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ. ಇದೇ ವೇಳೆ ನಿಫಾದಿಂದಾಗಿ ಕೋಝಿಕೋಡು ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಸೂಪರಿಂಟೆಂಡೆಂಟ್ ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ ಜಿಲ್ಲಾ ನ್ಯಾಯಾಲಯ ಕಾರ್ಯ ಕಲಾಪವನ್ನು ರದ್ದುಗೊಳಿಸುವಂತೆ ಬಾರ್ ಅಸೋಸಿಯೇಷನ್ ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.