
ಕಲ್ಲಿಕೋಟೆ/ಬೆಂಗಳೂರು(ಮೇ.21): ಭಾರತಕ್ಕೆ ಆವರಿಸಿರುವ ನಿಫಾ ವೈರಸ್'ಗೆ ಈಗಾಗಲೇ 10 ಮಂದಿ ಮೃತಪಟ್ಟಿದ್ದು 5ಕ್ಕೂ ಹೆಚ್ಚು ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತದೆ.
ಸೋಂಕು ಹರಡುವ ಭೀತಿಯಿಂದ ಕರ್ನಾಟಕದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಕೇರಳದ ಕಲ್ಲಿಕೋಟೆ ಜಿಲ್ಲೆಯ ಚಾಂಗ್ರೋತ್ ಗ್ರಾಮದಲ್ಲಿ ಕಳೆದ ವಾರ ಒಂದೇ ಗ್ರಾಮದ ಮೂವರು ಮೃತಪಟ್ಟಿದ್ದರು. ನಾಲ್ಕು ದಿನಗಳ ಹಿಂದಷ್ಟೆ ನಾಲ್ವರು ನಿಫಾ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇರಳ ಆರೋಗ್ಯ ಸೇವಾ ನಿರ್ದೇಶಕ ಸ್ಪಷ್ಟಪಡಿಸಿದ್ದಾರೆ.
ಬಾವಲಿ, ಹಂದಿಯಿಂದ ಹರಡುವ ವೈರಸ್
ಬಾವಲಿ ಹಾಗೂ ಹಂದಿಯಿಂದ ನಿಫಾ ವೈರಸ್ ಹರಡಲಿದ್ದು ಆರಂಭದಲ್ಲಿ ತಲೆ ನೋವು ಹಾಗೂ ಜ್ವರದ ರೂಪದಲ್ಲಿ ಕಾಣಿಸಿಕೊಳ್ಳುತ್ತದೆ. ಕರಾವಳಿಯ ಪ್ರದೇಶದಲ್ಲಿ ಆವರಿಸುವ ಕಾರಣ ಹೆಚ್ಚು ಮುಂಜಾಗ್ರತೆ ವಹಿಸಲಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಅಧಿಕಾರಿಗಳು ಸುವರ್ಣ ನ್ಯೂಸ್'ಗೆ ತಿಳಿಸಿದ್ದಾರೆ.
ನಿಫಾ ವೈರಸ್ ಮೊದಲ ಬಾರಿಗೆ 1998ರಲ್ಲಿ ಮಲೇಶಿಯಾದಲ್ಲಿ ಪತ್ತೆಯಾಗಿತ್ತು. ಆಗ 100ಕ್ಕೂ ಹೆಚ್ಚು ಮಂದಿ ಈ ಸೋಂಕಿನಿಂದ ಸಾವನಪ್ಪಿದ್ದರು. 2001ರಲ್ಲಿ ಭಾರತದ ಬಾಂಗ್ಲಾದೇಶದಲ್ಲಿ ಕಾಣಿಸಿಕೊಂಡಿದ್ದರೆ 2004ರಲ್ಲಿ ಬಾಂಗ್ಲಾದೇಶದಲ್ಲಿ ಉಲ್ಬಣಿಸಿತ್ತು.
ಲಕ್ಷಣಗಳು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.