ವಿಶ್ವನಾಥ್ ಹಂಗ್ ಅಂದಿದಕ್ಕೆ ನಿರಂಜನಾನಂದ ಸ್ವಾಮೀಜಿ ಹಿಂಗ್ ಅಂದ್ರು!

Published : Jun 30, 2018, 02:30 PM IST
ವಿಶ್ವನಾಥ್ ಹಂಗ್ ಅಂದಿದಕ್ಕೆ ನಿರಂಜನಾನಂದ ಸ್ವಾಮೀಜಿ ಹಿಂಗ್ ಅಂದ್ರು!

ಸಾರಾಂಶ

ಮುಂದುವರೆದ ಖಾವಿ, ಖಾದಿ ವಾಕ್ಸಮರ ನಿರಂಜನಾನಂದ ಪುರಿ ಸ್ವಾಮೀಜಿ ವಿರುದ್ದ ವಿಶ್ವನಾಥ್ ಗರಂ ವೈಯಕ್ತಿಕ ಪ್ರತಿಷ್ಠ ಬಿಡುವಂತೆ ವಿಶ್ವನಾಥ್ ಗೆ ಟಾಂಗ್ ಸಮಾಜದ ಪರ ಧ್ವನಿ ಎತ್ತುವುದನ್ನು ನಿಲ್ಲಿಸುವುದಿಲ್ಲ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ

ದಾವಣಗೆರೆ(ಜೂ.30): ಮಾಜಿ ಸಿಎಂ ಸಿದ್ದರಾಮಯ್ಯ ಪರ ಮಾತನಾಡುತ್ತಿರುವ  ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ, ತಮಗೆ ಅದೇ ಸಿದ್ದರಾಮಯ್ಯ ಅವರಿಂದ ಅನ್ಯಾಯವಾದಾಗ ಧ್ವನಿ ಎತ್ತಲಿಲ್ಲ ಎಂದು ಜೆಡಿಎಸ್ ನಾಯಕ ಹೆಚ್.ವಿಶ್ವನಾಥ್ ಆರೋಪಿಸಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ನಿರಂಜನಾನಂದ ಪುರಿ ಸ್ವಾಮೀಜಿ, ವೈಯಕ್ತಿಕ ಪ್ರತಿಷ್ಠೆ ಬದಿಗಿರಿಸುವಂತೆ ವಿಶ್ವನಾಥ್ ಅವರಿಗೆ ಸಲಹೆ ನೀಡಿದ್ದಾರೆ.

ನಾನು ನನ್ನ ಸಮಾಜದ ಪರ ಇದ್ದು, ಹರಿಹರ ಬ್ರಹ್ಮ ಬಂದರೂ ನನ್ನ ಧ್ವನಿ ಅಡಗಿಸಲು ಸಾಧ್ಯವಿಲ್ಲ ಎಂದಿರುವ ನಿರಂಜನಾನಂದ ಪುರಿ ಸ್ವಾಮೀಜಿ, ವಿಶ್ವನಾಥ್ ಕೂಡ ನಮ್ಮ ಸಮಾಜದ ಹಿರಿಯ ನಾಯಕರಾಗಿದ್ದು ಅವರಿಗೆ ತೊಂದರೆಯಾದಾಗಲೂ ತಾವು ಬೆಂಬಲಕ್ಕೆ ನಿಂತಿದ್ದಾಗಿ ತಿಳಿಸಿದ್ದಾರೆ.

ವಿಶ್ವನಾಥ್ ಅವರ ಪರಿಸ್ಥಿತಿಯನ್ನು ಲೇವಡಿ ಮಾಡಿರುವ ನಿರಂಜನಾನಂದ ಪುರಿ ಸ್ವಾಮೀಜಿ, ಆನೆ ಕೆರೆಯಲ್ಲಿ ಸ್ನಾನ ಮಾಡುವಾಗ ತಲೆ ಮೇಲೆ ದಡದ ಮಣ್ಣನ್ನು ಹಾಕಿಕೊಳ್ಳುವಂತೆ ವಿಶ್ವನಾಥ್ ಕೂಡ ತಮ್ಮ ತಲೆ ಮೇಲೆ ಮಣ್ಣು ಹಾಕಿಕೊಂಡು ಸಮಾಜ ಮತ್ತು ಮಠದ ಮೇಲೆ ಆರೋಪ ಹೊರಿಸುವುದು ಸರಿಯಲ್ಲ ಎಂದಿದ್ದಾರೆ. ವಿಶ್ವನಾಥ್ ನಮ್ಮ ಸಮಾಜದ ಹಿರಿಯ ನಾಯಕರಾಗಿದ್ದು, ಅವರಿಗೆ ಮಾರ್ಗದರ್ಶನ ಮಾಡುವಷ್ಟು ತಾವು ದೊಡ್ಡವರಲ್ಲ ಎಂದು ಅವರು ನುಡಿದಿದ್ದಾರೆ.

ಒಂದು ಕಾಲದಲ್ಲಿ ದೇವೆಗೌಡರನ್ನು ಗಟಸರ್ಪ ಎಂದಿದ್ದ ವಿಶ್ವನಾಥ್, ಈಗ ಅದೇ ಸರ್ಪದ ಆಶ್ರಯದಲ್ಲಿರುವುದೇಕೆ ಎಂದು ಪ್ರಶ್ನಿಸಿರುವ ನಿರಂಜನಾನಂದ ಪುರಿ ಸ್ವಾಮೀಜಿ, ವಿಶ್ವನಾಥ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಕೈ ಬೀಡಬೇಡಿ ಎಂದು ತಾವು ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿಕೊಂಡಿದ್ದಾಗಿ ಸ್ಪಷ್ಟಪಡಿಸಿದರು.

ಇದೇ ವೇಳೆ ಮಠವನ್ನು ವಿಶ್ವನಾಥ್ ಕಟ್ಟಿಲ್ಲ ಬದಲಿಗೆ ಇಡೀ ಸಮಾಜ ಕನಕ ಗುರುಪೀಠವನ್ನು ಸ್ಥಾಪಿಸಿದೆ ಎಂಬುದನ್ನು ಅವರು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದಿರುವ ನಿರಂಜನಾನಂದ ಪುರಿ ಸ್ವಾಮೀಜಿ, ಒಂದು ವೇಳೆ ಮಠವನ್ನು ಟೀಕಿಸಿ ಅವರ ರಾಜಕೀಯ ಬೇಳೆ ಬೆಯುವುದಾದರೆ ತಮಗೆ ಯಾವುದೇ ಅಭ್ಯಂತರವಿಲ್ಲ ಎಂದು ಕಿಡಿಕಾರಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನನಗೆ ಎಚ್ಚರಿಕೆ ಕೊಡೋ ಮುನ್ನ ಹುಷಾರ್, ಕಾಮನ್‌ಸೆನ್ಸ್ ಇಟ್ಟುಕೊಂಡು ಡೀಲ್ ಮಾಡಿ, ಪತ್ರ ಬರೆದವನಿಗೆ ಡಿಕೆಶಿ ವಾರ್ನಿಂಗ್!
5 ಸಾವಿರ ಕೊಡ್ತೀನಿ ರೂಮ್‌ಗೆ ಬಾ ಅಂದ್ರು? ಬ್ರಹ್ಮಾನಂದ ಗುರೂಜಿಯ ವಿಡಿಯೋ ವೈರಲ್