ನೀರವ್‌ ಮೋದಿಗೆ ಎದುರಾಗಿವೆ ಮತ್ತಷ್ಟು ಸಂಕಷ್ಟ

Published : Feb 20, 2018, 07:37 AM ISTUpdated : Apr 11, 2018, 12:47 PM IST
ನೀರವ್‌ ಮೋದಿಗೆ ಎದುರಾಗಿವೆ ಮತ್ತಷ್ಟು ಸಂಕಷ್ಟ

ಸಾರಾಂಶ

ಪಿಎನ್‌ಬಿಗೆ 11400 ಕೋಟಿ ರು. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಗಳು, ಸೋಮವಾರವೂ ಉದ್ಯಮಿಗಳಾದ ನೀರವ್‌ ಮೋದಿ ಮತ್ತು ಮೆಹುಲ್‌ ಚೋಕ್ಸಿ ವಿರುದ್ಧ ತನಿಖೆ ತೀವ್ರಗೊಳಿಸಿದ್ದು ಬೆಂಗಳೂರು ಸೇರಿದಂತೆ ದೇಶಾದ್ಯಂತ ಹಲವು ಕಡೆಗಳಲ್ಲಿ ದಾಳಿ ನಡೆಸಿವೆ.

ನವದೆಹಲಿ/ಮುಂಬೈ: ಪಿಎನ್‌ಬಿಗೆ 11400 ಕೋಟಿ ರು. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಗಳು, ಸೋಮವಾರವೂ ಉದ್ಯಮಿಗಳಾದ ನೀರವ್‌ ಮೋದಿ ಮತ್ತು ಮೆಹುಲ್‌ ಚೋಕ್ಸಿ ವಿರುದ್ಧ ತನಿಖೆ ತೀವ್ರಗೊಳಿಸಿದ್ದು ಬೆಂಗಳೂರು ಸೇರಿದಂತೆ ದೇಶಾದ್ಯಂತ ಹಲವು ಕಡೆಗಳಲ್ಲಿ ದಾಳಿ ನಡೆಸಿವೆ.

ಸೋಮವಾರ ಇಡಿ ಅಧಿಕಾರಿಗಳು, ಚೋಕ್ಸಿಗೆ ಸೇರಿದ 22 ಕೋಟಿ ರು. ಮೌಲ್ಯದ ಆಭರಣಗಳನ್ನು ವಶಪಡಿಸಿಕೊಂಡಿದ್ದರೆ, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು 7 ಆಸ್ತಿ ಜಪ್ತಿ ಮಾಡಿವೆ. ಮತ್ತೊಂದೆಡೆ ಸಿಬಿಯ ಅಧಿಕಾರಿಗಳು ನೀರವ್‌ ಮೋದಿ ಕಂಪನಿಗೆ ಸೇರಿದ ನಾಲ್ವರು ಹಿರಿಯ ಅಧಿಕಾರಿಗಳನ್ನು ತೀವ್ರ ವಿಚಾರಣೆಗೆ ಗುರಿಪಡಿಸಿದ್ದಾರೆ. ಇದರೊಂದಿಗೆ ಇದುವರೆಗೆ ನೀರವ್‌ ಮೋದಿ ಮತ್ತು ಚೋಕ್ಸಿಗೆ ಸೇರಿ 5671 ಕೋಟಿ ರು.ಮೌಲ್ಯದ ಚಿನ್ನಾಭರಣ, ವಜ್ರ ವಶಪಡಿಸಿಕೊಂಡಂತೆ ಆಗಿದೆ.

ಇದೇ ವೇಳೆ ಪಿಎನ್‌ಬಿಯ ಮುಂಬೈ ಶಾಖೆಯ ಅಧಿಕಾರಿಗಳು ಬ್ಯಾಂಕಿಂಗ್‌ ವ್ಯವಸ್ಥೆಯ ಕಣ್ಣು ತಪ್ಪಿಸಿ ಭಾರೀ ಪ್ರಮಾನದಲ್ಲಿ ಎಲ್‌ಒಯು (ಲೆಟರ್‌ ಆಫ್‌ ಅಂಡರ್‌ಟೇಕಿಂಗ್‌) ನೀಡಿದ್ದಾದರೂ ಹೇಗೆ ಎಂಬುದರ ಬಗ್ಗೆ ತನಿಖೆ ತೀವ್ರಗೊಳಿಸಿದ್ದಾರೆ.

ಬ್ಯಾಂಕ್‌ ಶಾಖೆ ಬಂದ್‌: ಈ ನಡುವೆ ಹಗರಣದ ಕೇಂದ್ರಬಿಂದುವಾದ ಪಿಎನ್‌ಬಿಯ ಮುಂಬೈನ ಬ್ರಾಡಿ ರೋಡ್‌ ಶಾಖೆಯನ್ನು ಸಿಬಿಐ ಅಧಿಕಾರಿಗಳು ಬಂದ್‌ ಮಾಡಿಸಿದ್ದು, ಅಲ್ಲಿನ ದಾಖಲೆ ಪತ್ರಗಳ ಪರಿಶೀಲನೆ ಆರಂಭಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ಯಾವುದಾದರೂ ಪುಸ್ತಕ ಸುಟ್ಟುಹಾಕಿದ್ದರೆ ಅದರು ಹೇಳಿ ಹೋಗು ಕಾರಣ..' ಲೇಖಕಿಯ ಪೋಸ್ಟ್‌ಗೆ ಭಾರೀ ಕಾಮೆಂಟ್ಸ್‌!
ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; 'ಯಾರಿಗೆ ಬೇಕು ಈ ಲೋಕ'ವೆಂದು ಲೈವ್‌ನಲ್ಲಿ ನೇಣಿಗೆ ಶರಣಾದ ಗೃಹಿಣಿ!