
ನವದೆಹಲಿ (ಆ. 21): ಸರ್ಕಾರಿ ಸ್ವಾಮ್ಯದ ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13 ಸಾವಿರ ಕೋಟಿ ರು. ವಂಚಿಸಿ ಪರಾರಿಯಾಗಿರುವ ವಜ್ರೋದ್ಯಮಿ ನೀರವ್ ಮೋದಿ ತನ್ನ ದೇಶದಲ್ಲೇ ಇದ್ದಾನೆ ಎಂದು ಬ್ರಿಟನ್ ಇದೇ ಮೊದಲ ಬಾರಿಗೆ ಒಪ್ಪಿಕೊಂಡಿದೆ.
ಇದರ ಬೆನ್ನಲ್ಲೇ, ಆತನನ್ನು ಭಾರತಕ್ಕೆ ಗಡೀಪಾರು ಮಾಡಿ ಎಂದು ಹಗರಣದ ತನಿಖೆ ನಡೆಸುತ್ತಿರುವ ಸಿಬಿಐ ವಿದೇಶಾಂಗ ಸಚಿವಾಲಯದ ಮೂಲಕ ಬ್ರಿಟನ್ ಸರ್ಕಾರಕ್ಕೆ ಕೋರಿಕೆ ಇಟ್ಟಿದೆ. ಈಗಾಗಲೇ ನೀರವ್ ಮೋದಿ ವಿರುದ್ಧ ಜಾಗತಿಕ ಪೊಲೀಸ್ ಸಂಘಟನೆ ಇಂಟರ್ಪೋಲ್ ಮೂಲಕ ರೆಡ್ಕಾರ್ನರ್ ನೋಟಿಸ್ ಹೊರಡಿಸಿರುವ ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ಪಡೆಯುವಂತೆಯೂ ಮನವಿ ಮಾಡಿದೆ.
ಸಿಬಿಐ ಮನವಿ ಮೇರೆಗೆ ಕಳೆದ ಜೂನ್ನಲ್ಲಿ ಇಂಟರ್ಪೋಲ್ ನೀರವ್ ವಿರುದ್ಧ ರೆಡ್ಕಾರ್ನರ್ ನೋಟಿಸ್ ಹೊರಡಿಸಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕಿನ ಹಗರಣ ಬೆಳಕಿಗೆ ಬರುವ ಕೆಲವೇ ದಿನಗಳ ಮುನ್ನ ನೀರವ್ ಕುಟುಂಬದ ಜತೆ ವಿದೇಶಕ್ಕೆ ಪರಾರಿಯಾಗಿದ್ದ. ಭಾರತ ಸರ್ಕಾರ ಪಾಸ್ಪೋರ್ಟ್ ರದ್ದುಗೊಳಿಸಿದ ತರುವಾಯವೂ ದೇಶದಿಂದ ದೇಶಕ್ಕೆ ಸುತ್ತಾಡುತ್ತಿದ್ದ. ಆತ ಬ್ರಿಟನ್ನಲ್ಲಿದ್ದಾನೆ ಎಂಬ ವರದಿಗಳು ಬಂದಿದ್ದವಾದರೂ ಅಲ್ಲಿನ ಸರ್ಕಾರ ಮಾತ್ರ ದೃಢೀಕರಿಸಿರಲಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.