
ನವದೆಹಲಿ (ಡಿ.03): ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಒದಗಿಸಿದ ಸಾಕ್ಷಿಯ ಬಗ್ಗೆ ಅಮಿಕಸ್ ಕ್ಯೂರಿ ಸಂಜಯ್ ಹೆಗ್ಡೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ.
ಕೈದಿಯಾಗಿರುವ ಮುಕೇಶ್ ಪ್ರಕರಣದ ಪ್ರಮುಖ ಆರೋಪಿಯಾಗಿರಲಿಲ್ಲ. ಜೊತೆಗೆ ಘಟನೆ ನಡೆದಾಗ ಇಬ್ಬರು ಕೈದಿಗಳ ಮೊಬೈಲ್ ಸ್ಥಳಗಳು ಬೇರೆ ಬೇರೆ ಕಡೆ ಪತ್ತೆಯಾಗಿದೆ ಎಂದು ನ್ಯಾಯಾಲಯದ ವಿಶೇಷ ವಿಚಾರಣೆಯಲ್ಲಿ ಸಂಜಯ್ ಹೆಗ್ಡೆ ಹೇಳಿದ್ದಾರೆ.
2012, ಡಿ.16.ರಂದು 23 ವರ್ಷದ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಚಲಿಸುತ್ತಿದ್ದ ಬಸ್ ನಲ್ಲಿ 6 ಮಂದಿ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಆಕೆಯ ಸ್ನೇಹಿತನೊಡನೆ ಬಸ್ ನಲ್ಲಿ ಪ್ರಯಾಣಿಸುವಾಗ ಆತನ ಕೈಕಾಲು ಕಟ್ಟಿ ಹಾಕಿ ಈಕೆಯ ಮೇಲೆ ಪೈಶಾಚಿಕ ಕೃತ್ಯ ನಡೆಸಿ ಬಸ್ ನಿಂದ ಹೊರ ಎಸೆದಿದ್ದರು. ಈ ಘಟನೆ ದೇಶಾದ್ಯಂತ ಭಾರೀ ಸುದ್ಧಿಯಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಸುಪ್ರೀಂಕೋರ್ಟ್ ನಾಲ್ವರು ಆರೋಪಿಗಳಿಗೆ ಮರಣದಂಡನೆ ನೀಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.