
ತಿರುವನಂತಪುರಂ(ಏ.16): ಭಾರತದ ರಾಜಕಾರಣವೇ ಹಾಗೆ. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳು ಕೇವಲ ರಾಜಕೀಯ ಅಖಾಡದಲ್ಲಿ ಮಾತ್ರ ಕಾಣ ಸಿಗುತ್ತವೆ. ಅದರಾಚೆ ಇರುವುದು ವಿರೋಧಿಗಳಿಗೂ ಒಳಿತನ್ನು ಬಯಸುವ ಶುದ್ಧ ಭಾರತೀಯ ಮನಸ್ಸು ಮಾತ್ರ.
ತುಲಾಭಾರ ಸಮಯದಲ್ಲಿ ಕಬ್ಬಿಣದ ಚೈನ್ ತುಂಡಾಗಿ ಬಿದ್ದ ಪರಿಣಾಮ, ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರನ್ನು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
ತಿರುವನಂತಪುರಂನ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಭೇಟಿ ನೀಡಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ತರೂರ್ ಆರೋಗ್ಯ ವಿಚಾರಿಸಿದರು. ಅಲ್ಲದೇ ಶೀಘ್ರವಾಗಿ ಗುಣಮುಖರಾಗುವಂತೆ ಹಾರೈಸಿದರು.
ಈ ಕುರಿತು ಟ್ವೀಟ್ ಮಾಡಿರುವ ಶಶಿ ತರೂರ್, 'ಮಾನವೀಯತೆ ಭಾರತದ ರಾಜಕಾರಣದ ಪ್ರಮುಖ ಆಧಾರಸ್ತಂಭವಾಗಿದ್ದು, ತಮ್ಮ ಬಿಡುವಿರದ ಚುನಾವಣಾ ಪ್ರಚಾರದ ಮಧ್ಯೆಯೂ ತಮ್ಮ ಆರೋಗ್ಯ ವಿಚಾರಿಸಿದ ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದ..' ಎಂದು ಹೇಳಿದ್ದಾರೆ.
ತಿರುವನಂತಪುರದ ದೇವಾಲಯವೊಂದರಲ್ಲಿ ಶಶಿ ತರೂರ್ ಅವರಿಗೆ ಹಣ್ಣು ಮತ್ತು ಸಿಹಿಯಿಂದ ತುಲಾಭಾರ ಮಾಡಲಾಗಿತ್ತು. ಈ ವೇಳೆ ಕಬ್ಬಿಣದ ಚೈನ್ ತುಂಡಾಗಿ ಬಿದ್ದ ಪರಿಣಾಮ ಶಶಿ ತರೂರ್ ತೀವ್ರವಾಗಿ ಗಾಯಗೊಂಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.