
ನವದೆಹಲಿ (ಆ.01): ನೀತಿ ಆಯೋಗದ ಉಪಾಧ್ಯಕ್ಷರಾಗಿರುವ ಅರವಿಂದ್ ಪನಗಾರಿಯಾ ಇಂದು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಆ.31 ಕ್ಕೆ ಇವರ ಸೇವಾವಧಿ ಮುಕ್ತಾಯಗೊಳ್ಳಲಿದ್ದು, ಶೈಕ್ಷಣಿಕ ಕ್ಷೇತ್ರಕ್ಕೆ ಮರಳಲಿದ್ದಾರೆ.
ಅರವಿಂದ್ ಪನಗಾರಿಯಾ ನೀತಿ ಆಯೋಗದ ಮೊದಲ ಉಪಾಧ್ಯಕ್ಷರಾಗಿದ್ದರು. ಇಂಡೋ-ಅಮೇರಿಕಾ ಅರ್ಥಶಾಸ್ತ್ರಜ್ಞರು ಮತ್ತು ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ಪ್ರೊಫೆಸರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ವಿಶ್ವಬ್ಯಾಂಕ್, ಐಎಂಎಫ್, ಏಷಿಯನ್ ಡೆವಲಪ್’ಮೆಂಟ್ ಬ್ಯಾಂಕ್’ಗಳಲ್ಲಿ ಉನ್ನತ ಹುದ್ದೆಯನ್ನು ನಿಭಾಯಿಸಿರುವ ಅಪಾರ ಅನುಭವ ಹೊಂದಿದ್ದಾರೆ.
ತಮ್ಮ ಕಾರ್ಯ ಸಾಧನೆಗಾಗಿ 2012 ರಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ಪಡೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.