ನಿತೀಶ್ ಅವಕಾಶವಾದಿ; ರಾಜ್ಯಪಾಲರ ಕ್ರಮದ ವಿರುದ್ಧ ಸುಪ್ರೀಂಗೆ ಮೊರೆ: ಲಾಲೂ

Published : Jul 27, 2017, 03:46 PM ISTUpdated : Apr 11, 2018, 12:38 PM IST
ನಿತೀಶ್ ಅವಕಾಶವಾದಿ; ರಾಜ್ಯಪಾಲರ ಕ್ರಮದ ವಿರುದ್ಧ ಸುಪ್ರೀಂಗೆ ಮೊರೆ: ಲಾಲೂ

ಸಾರಾಂಶ

ಮಹಾಮೈತ್ರಿಯನ್ನು ತೊರೆದು ಬಿಜೆಪಿ ಕೈಹಿಡಿದಿರುವ ನಿತೀಶ್ ಕುಮಾರ್ ವಿರುದ್ಧ ಹರಿಹಾಯ್ದಿರುವ ಆರ್'ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್, ಸರ್ಕಾರ ರಚಿಸಲು ರಾಜ್ಯಪಾಲರು ಜೆಡಿಯುಗೆ ಆಹ್ವಾನಿಸಿರುವ ಕ್ರಮವನ್ನು ಸುಪ್ರೀಂ ಕೋರ್ಟ್'ನಲ್ಲಿ ಪ್ರಶ್ನಿಸುವುದಾಗಿ ಹೇಳಿದ್ದಾರೆ.

ಪಾಟ್ನಾ: ಮಹಾಮೈತ್ರಿಯನ್ನು ತೊರೆದು ಬಿಜೆಪಿ ಕೈಹಿಡಿದಿರುವ ನಿತೀಶ್ ಕುಮಾರ್ ವಿರುದ್ಧ ಹರಿಹಾಯ್ದಿರುವ ಆರ್'ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್, ಸರ್ಕಾರ ರಚಿಸಲು ರಾಜ್ಯಪಾಲರು ಜೆಡಿಯುಗೆ ಆಹ್ವಾನಿಸಿರುವ ಕ್ರಮವನ್ನು ಸುಪ್ರೀಂ ಕೋರ್ಟ್'ನಲ್ಲಿ ಪ್ರಶ್ನಿಸುವುದಾಗಿ ಹೇಳಿದ್ದಾರೆ.

ಕಳೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಸರ್ಕಾರ ರಚನೆಗೆ ಆರ್'ಜೆಡಿವನ್ನು ಆಹ್ವಾನಿಸಬೇಕಿತ್ತು ಎಂದು ಅವರು ಹೇಳಿದ್ದಾರೆ.

ರಾಜ್ಯಪಾಲರ ನಿರ್ಧಾರವನ್ನು ನಾವು ಸುಪ್ರೀಂ ಕೋರ್ಟ್'ನಲ್ಲಿ ಪ್ರಶ್ನಿಸುವೆವು. ಆ ನಿಟ್ಟಿಲ್ಲಿ ನಾವು ಕಾನೂನು ಸಲಹೆಯನ್ನು ಪಡೆದು, ಮುಂದಿನ ಕ್ರಮ ಕೈಗೊಳ್ಳುವುದಾಗಿ ಲಾಲೂ ತಮ್ಮ ಮುಂದಿನ ನಡೆಯ ಬಗ್ಗೆ ಸುಳಿವು ನೀಡಿದ್ದಾರೆ.

ನಿತೀಶ್ ಕುಮಾರ್'ರನ್ನು ಅವಕಾಶವಾದಿಯೆಂದು ಕರೆದಿರುವ ಲಾಲೂ, ನಿತೀಶ್  ಬಿಹಾರದ ಜನತೆಗೆ ದ್ರೋಹ ಬಗೆದಿದ್ದಾರೆ, ಹಾಗೂ ಅಧಿಕಾರಕ್ಕಾಗಿ ಬಿಜೆಪಿ ಜತೆ ಕೈಜೋಡಿಸಿದ್ದಾರೆಂದು ಹೇಳಿ ಟೀಕಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೈಸೂರು ಏಕತಾ ಮಹಲ್‌ ವಿವಾದ, ಕೋರ್ಟ್ ಮೆಟ್ಟಲೇರಿದ ರಾಜಮಾತೆ ಪ್ರಮೋದಾದೇವಿ!
ವಿಮಾನದ ಬಾಲಕ್ಕೆ ಪ್ಯಾರಾಚೂಟ್ ಸಿಲುಕಿ15,000 ಅಡಿ ಎತ್ತರದಲ್ಲಿ ನೇತಾಡಿದ ಸ್ಕೈಡೈವರ್ ಬದುಕುಳಿದಿದ್ದು ಹೇಗೆ? ವೀಡಿಯೋ