
ನವದೆಹಲಿ: ಬಾಲಿವುಡ್ ಸಿನಿಮಾ 'ಪದ್ಮಾವತಿ' ಚಿತ್ರತಂಡದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ ಬೆದರಿಕೆ ಒಡ್ಡುತ್ತಿರುವ ಮುಖ್ಯಮಂತ್ರಿಗಳು, ಸಚಿವರುಗಳು ಹಾಗೂ ಹಲವು ರಾಜಕೀಯ ಮುಖಂಡರ ವಿರುದ್ಧ ಒಂದೆಡೆ ಸುಪ್ರೀಂ ಕೋರ್ಟ್ ಗರಂ ಆಗಿದ್ದರೆ, ಇನ್ನೊಂದೆಡೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ‘ಪದ್ಮಾವತಿ ಬೇಡ’ ಎಂಬ ರಾಗ ಹಾಡಿದ್ದಾರೆ.
ವಿವಾದಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸುವವರೆಗೆ ಬಿಹಾರದಲ್ಲಿ ಪದ್ಮಾವತಿ ಪ್ರದರ್ಶನಕ್ಕೆ ಅವಕಾಶ ನೀಡ;ಲಾಗದು ಎಂದು ಹೇಳಿದ್ದಾರೆ.
ಪದ್ಮಾವತಿಗೆ ವಿರೋಧ ವ್ಯಕ್ತಪಡಿಸಿದ 5ನೇ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಗಿದ್ದಾರೆ. ಬಿಜೆಪಿ ಆಡಳಿತವಿರುವ ರಾಜ್ಯಗಳು ಪ್ರದರ್ಶನಕ್ಕೆ ಅವಕಾಶವನ್ನು ನಿರಾಕರಿಸಿವೆ. ಈ ಮುಂಚೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಗುಜರಾತ್ ಸಿಎಂ ವಿಜಯ್ ರೂಪಾನಿ, ರಾಜಸ್ಥಾನ ಸಿಎಂ ವಸುಂಧರಾ ರಾಜೇ ಹಾಗೂ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಪದ್ಮಾವತಿಯನ್ನು ವಿರೋಧಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.