
ನವದೆಹಲಿ: 4 ವರ್ಷಗ ಹಿಂದೆ ಎನ್ಡಿಎ ಮೈತ್ರಿಕೂಟಕ್ಕೆ ವಿದಾಯ, ಕಳೆದ ವರ್ಷದ ಆಗಸ್ಟ್ನಲ್ಲೇ ಮತ್ತೆ ಎನ್ಡಿಎಗೆ ಸೇರಿದ್ದ ಜೆಡಿಯು ನಾಯಕ, ಬಿಹಾರ ಸಿಎಂ ನಿತೀಶ್ ಕುಮಾರ್ ಮತ್ತೆ ಎನ್ಡಿಎಗೆ ಗುಡ್ಬೈ ಹೇಳಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.
ಈ ನಿಟ್ಟಿನಲ್ಲಿ ಈಗಾಗಲೇ ಅವರು ತಮ್ಮ ದೂತರನ್ನು ಆರ್ಜೆಡಿ ಮುಖ್ಯಸ್ಥ ಲಾಲು ಬಳಿ ಕಳುಹಿಸಿದ್ದು, ಇಬ್ಬರ ನಡುವೆ ಒಂದು ಸುತ್ತಿನ ಮಾತುಕತೆಯಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಅಲ್ಲದೆ ನಿತೀಶ್ ಈ ನಿಲುವನ್ನು ಈಗಾಗಲೇ ಕಾಂಗ್ರೆಸ್ ಸೇರಿದಂತೆ ಇತರೆ ಕೆಲವು ಪಕ್ಷಗಳ ನಾಯಕರಿಗೂ ಲಾಲು ರವಾನಿಸಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆ ನಡುವೆಯೇ ನಮ್ಮ ಜೊತೆಯ ಮೈತ್ರಿಯ ಬಾಗಿಲು ನಿತೀಶ್ಗೆ ಮುಚ್ಚಿದೆ ಎಂದು ಆರ್ಜೆಡಿ ನಾಯಕ, ಲಾಲು ಪುತ್ರ ತೇಜಸ್ವಿ ಯಾದವ್ ಹೇಳಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಈ ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು, ಆರ್ಜೆಡಿ, ಕಾಂಗ್ರೆಸ್ ಹಾಗೂ ಇತರೆ ಕೆಲ ಸಣ್ಣ ಪಕ್ಷಗಳು ಮೈತ್ರಿಮಾಡಿಕೊಂಡು ಅಧಿಕಾರಕ್ಕೆ ಏರುವಲ್ಲಿ ಸಫಲವಾಗಿದ್ದವು. ಆದರೆ ನಂತರ ಮೈತ್ರಿಕೂಟಕ್ಕೆ ನಿತೀಶ್ ವಿದಾಯ ಹೇಳಿ ಎನ್ಡಿಎ ಸೇರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.