
ನವದೆಹಲಿ(ಜು.13): ಕಳೆದ ಲೋಕಸಭಾ ಚುನಾವಣೆಯಿಂದ ಐತಿಹಾಸಿಕ ಸರಣಿ ಸೋಲಿಗೆ ಸಿಲುಕಿರುವ ಕಾಂಗ್ರೆಸ್ನ ಪುನಶ್ಚೇತನಕ್ಕಾಗಿ ನಾಯಕತ್ವದ ಬದಲಾವಣೆಯಾಗಬೇಕಿದೆ. ಬಿಹಾರ ಸಿಎಂ ನಿತೀಶ್ ಕುಮಾರ್ ಅವರಿಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಖ್ಯಾತ ಇತಿಹಾಸ ತಜ್ಞ ರಾಮಚಂದ್ರ ಗುಹಾ ಪ್ರತಿಪಾದಿಸಿದ್ದಾರೆ.
ದೆಹಲಿಯಲ್ಲಿ ‘ಇಂಡಿಯಾಆಫ್ಟರ್ ಗಾಂಧಿ’(ಗಾಂಧಿ ನಂತರದ ಭಾರತ) ೧೦ನೇ ವಾರ್ಷಿಕ ಆವೃತ್ತಿ ಪುಸ್ತಕ ಅನಾವರಣಗೊಳಿಸಿ ಮಾತನಾಡಿದ ಅವರು, ‘ಕಾಂಗ್ರೆಸ್ ನಾಯಕತ್ವವಿಲ್ಲದ ಪಕ್ಷವಾಗಿದ್ದು, ನಿತೀಶ್ ಪಕ್ಷವಿಲ್ಲದ ನಾಯಕ ಎನಿಸಿದ್ದಾರೆ.ನಿತೀಶ್ಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ದೊರೆಯದ ಹೊರತು ಭಾರತದ ರಾಜಕೀಯ ವ್ಯವಸ್ಥೆಯಲ್ಲಿ ನಿತೀಶ್ ಮತ್ತು ಸೋನಿಯಾ ಗಾಂಧಿ ಅವರಿಗೆ ಭವಿಷ್ಯವಿಲ್ಲ,’ ಎಂದು ಗುಹಾ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.