
ಅಹಮದಾಬಾದ್[ಜ.25]: ಮೇಲ್ವರ್ಗಗಳಲ್ಲಿನ ಬಡವರಿಗೆ ಶೇ.10ರಷ್ಟುಮೀಸಲು ನೀಡುವ ಕೇಂದ್ರ ಸರ್ಕಾರದ ಕಾಯ್ದೆಯನ್ನು ಮೊದಲು ಜಾರಿಗೆ ತಂದ ರಾಜ್ಯ ಎಂಬ ಹಿರಿಮೆ ಹೊಂದಿರುವ ಗುಜರಾತ್, ಮೀಸಲು ಅನುಷ್ಠಾನಕ್ಕೆ ಸಂಬಂಧಿಸಿದಂತೆ ಎರಡು ನಿರ್ಧಾರಗಳನ್ನು ಕೈಗೊಂಡಿದೆ. 1. ಮೀಸಲಾತಿಯ ಲಾಭ ಪಡೆಯುವ ವ್ಯಕ್ತಿಗಳು 1978ಕ್ಕಿಂತ ಮುಂಚೆಯೇ ಗುಜರಾತಿನಲ್ಲಿ ನೆಲೆಯೂರಿರಬೇಕು. 2. ವಾರ್ಷಿಕ 8 ಲಕ್ಷ ರು. ಒಳಗೆ ಆದಾಯ ಹೊಂದಿರಬೇಕು. ಇದನ್ನು ಬಿಟ್ಟರೆ, ಮನೆ ಅಥವಾ ಜಮೀನು ಎಷ್ಟಿದೆ ಎಂಬುದನ್ನು ಪರಿಗಣಿಸುವುದಿಲ್ಲ ಎಂದು ಸರ್ಕಾರ ಹೇಳಿದೆ.
ಇದರಿಂದಾಗಿ 1978ರ ನಂತರ ಗುಜರಾತಿನಲ್ಲಿ ನೆಲೆ ನಿಂತವರಿಗೆ ಮೀಸಲಾತಿಯ ಪ್ರಯೋಜನ ಸಿಗುವುದಿಲ್ಲ. ಈ ನಿರ್ಧಾರದ ಮೂಲಕ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಸ್ಥಳೀಯರಿಗಷ್ಟೇ ಆದ್ಯತೆ ಸಿಕ್ಕಂತಾಗುತ್ತದೆ. ಗುಜರಾತನ್ನೇ ತಮ್ಮ ತವರು ಮಾಡಿಕೊಂಡಿರುವ ಅನ್ಯ ರಾಜ್ಯಗಳ ಜನರಿಗೆ ಇದರಿಂದ ಅನ್ಯಾಯವಾಗಲಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
ಗುಜರಾತಿನಲ್ಲಿ ಜೀವನ ಸಾಗಿಸುತ್ತಿರುವ ಸಹಸ್ರಾರು ಜನರು ಅದರಲ್ಲೂ ವಿಶೇಷವಾಗಿ ಹಿಂದಿ ಭಾಷಿಕ ರಾಜ್ಯಗಳ ಮಂದಿ ಮೀಸಲಿನಿಂದ ವಂಚಿತರಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಉತ್ತರ ಭಾರತೀಯ ವಿಕಾಸ ಪರಿಷದ್ ಸರ್ಕಾರದ ಮೊರೆ ಹೋಗಲು ನಿರ್ಧರಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ