
ಹಾಸನ: ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರ ಗೊಳಿಸಲು ಬಿಜೆಪಿ ಯತ್ನಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿ ದಂತೆ ನಾನು ಯಾರನ್ನೂ ದೂಷಿಸಲು ಹೋಗುವು ದಿಲ್ಲ.
ಒಬ್ಬೊಬ್ಬರು ಒಂದೊಂದು ರೀತಿ ಚಿತ್ರ- ವಿಚಿತ್ರ ಹೇಳಿಕೆ ನೀಡುತ್ತಿ ದ್ದಾರೆ. ಅದಕ್ಕೆ ಪ್ರತಿಕ್ರಿಯಿಸುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ. ಸರ್ಕಾರವನ್ನು ಅತಂತ್ರ ಸ್ಥಿತಿಗೆ ದೂಡುವ ವಿಚಾರದಲ್ಲಿ ಹೆಚ್ಚಿನ ಪ್ರಚಾರ ನೀಡುತ್ತಿರುವ ಮಾಧ್ಯಮಗಳನ್ನೂ ದೂಷಿಸುವುದಿಲ್ಲ ಎಂದು ಹೊಳೆನರಸೀಪುರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ದೇವೇಗೌಡರ ಕುಟುಂಬದ ಒಡ್ಡೋ ಲಗ ಮಾತ್ರ ಪ್ರಧಾನಿ ಅವರನ್ನು ಭೇಟಿ ಮಾಡಿದೆ ಎಂಬ ರಾಜ್ಯ ಬಿಜೆಪಿ ಟೀಕೆಗೆ ತಿರುಗೇಟು ನೀಡಿದ ಗೌಡರು, ನಾನು ಲೋಕಸಭಾ ಸದಸ್ಯನಾಗಿ, ಇಬ್ಬರು ಮಕ್ಕಳಲ್ಲಿ ಒಬ್ಬ ಮುಖ್ಯಮಂತ್ರಿ ಆಗಿ ಮತ್ತೊಬ್ಬ ಸಚಿವರಾಗಿ ಭೇಟಿ ಮಾಡಿದ್ದೇವೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.