ರಾಜ್ಯದಲ್ಲಿ ರಚನೆಯಾಗಲಿದೆಯಾ ಬಿಜೆಪಿ ಸಮ್ಮಿಶ್ರ ಸರ್ಕಾರ ?

Published : May 15, 2019, 12:19 PM IST
ರಾಜ್ಯದಲ್ಲಿ ರಚನೆಯಾಗಲಿದೆಯಾ ಬಿಜೆಪಿ ಸಮ್ಮಿಶ್ರ ಸರ್ಕಾರ ?

ಸಾರಾಂಶ

ರಾಜ್ಯದಲ್ಲಿ ಲೋಕಸಭಾ ಚುನಾವಣೆ ಬಳಿಕ ಸರ್ಕಾರ ಪತನವಾಗಲಿದೆ ಎಂದು ಹಲವು ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ ಇದೀಗ ಹೊಸ ಸಮ್ಮಿಶ್ರ ಸರ್ಕಾರ ಮಾತೊಂದು ಕೇಳಿ ಬಂದಿದೆ. 

ಬೆಂಗಳೂರು: ಬಿಜೆಪಿ ಜೊತೆ ಸಮ್ಮಿಶ್ರ ಸರ್ಕಾರ ರಚಿಸುವ ಯಾವುದೇ ಪ್ರಸ್ತಾಪವನ್ನು ಪ್ರಧಾನಿ ಮೋದಿ ಅವರ ಮುಂದೆ ಇಟ್ಟಿಲ್ಲ, ಈ ಕುರಿತು ಬರುತ್ತಿರುವ ವರದಿ ಆಧಾರ ರಹಿತ ಎಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಪ್ರತಿಕ್ರಿಯಿಸಿದ್ದಾರೆ. 

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಹಿಂದೆ ಪ್ರಧಾನಿ ಮೋದಿ ಅವರನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭೇಟಿ ಮಾಡಿದ ಸಂದರ್ಭದಲ್ಲಿ ತಾವು ಸಹ ಜೊತೆಗಿದ್ದು, ಕೇವಲ ಬರ ಪರಿಹಾರದ ಬಗ್ಗೆ ಮಾತನಾಡ ಲಾಗಿತ್ತು ಎಂದರು. 

ಲೋಕಸಭಾ ಚುನಾವಣೆ ಫಲಿತಾಂಶ ಹೊರಬಂದ ನಂತರ ಮೈತ್ರಿ ಸರ್ಕಾರ ಪತನ ಆಗುತ್ತದೆ ಎಂದು ಬಿಜೆಪಿ ಹೇಳುತ್ತಿದ್ದಾರೆ. ಸರ್ಕಾರ ಬೀಳಲಿದೆ ಎಂದು ಯಡಿಯೂರಪ್ಪ 9 ತಿಂಗಳಿಂದ ಹೇಳಿಕೊಂಡು ಬರುತ್ತಿದ್ದಾರೆ. ಯಡಿಯೂರಪ್ಪ ಜ್ಯೋತಿಷ್ಯ ಸುಳ್ಳಾಗಲಿದೆ. ಅವರು ಸಂಖ್ಯಾಶಾಸ್ತ್ರ ಹೇಳುತ್ತಾರೆಂದು ಕಾಣುತ್ತದೆ. ನಾನು ಕೂಡ ಫೋನ್ ಮಾಡಿ ಶಾಸ್ತ್ರ ತಿಳಿದುಕೊಳ್ಳುತ್ತೇನೆ ಎಂದು ವ್ಯಂಗ್ಯವಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!