ಎಸ್'ಎಸ್'ಎಲ್'ಸಿ ವಿದ್ಯಾರ್ಥಿಗಳೇ ಹುಷಾರ್: ಒಂದು ನಿಮಿಷ ಲೇಟಾದ್ರು ನಿಮ್ಮ ಭವಿಷ್ಯ ಹಾಳಾಗುತ್ತೆ

Published : Jan 11, 2017, 05:23 AM ISTUpdated : Apr 11, 2018, 12:56 PM IST
ಎಸ್'ಎಸ್'ಎಲ್'ಸಿ ವಿದ್ಯಾರ್ಥಿಗಳೇ ಹುಷಾರ್: ಒಂದು ನಿಮಿಷ ಲೇಟಾದ್ರು ನಿಮ್ಮ ಭವಿಷ್ಯ ಹಾಳಾಗುತ್ತೆ

ಸಾರಾಂಶ

ಎಸ್'ಎಸ್'ಎಲ್ಸಿ ಪರೀಕ್ಷೆ ಪ್ರಾರಂಭವಾಗುವುದು ಬೆಳಿಗ್ಗೆ 9.30 ಗಂಟೆಗೆ. ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳು 9.15ಕ್ಕೆ ಮೊದಲ ಲಾಂಗ್ ಬೆಲ್ ಹೊಡೆದ ನಂತರ ಕಡ್ಡಾಯವಾಗಿ ಪರೀಕ್ಷಾ ಕೊಠಡಿಗೆ ಹಾಜರಾಗಬೇಕು.

ಬೆಂಗಳೂರು(ಜ.11): ಕರ್ನಾಟಕ ಪ್ರೌಢಶಿಕ್ಷಣ ಮಂಡಳಿಯು ಎಸ್'ಎಸ್'ಎಲ್'ಸಿ ಪರೀಕ್ಷೆಯಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ  ಹೊಸ ನಿಯಮವನ್ನು ಜಾರಿಗೊಳಿಸಿದೆ. ಹೊಸ ನೀತಿಯಿಂದ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗೆ ಒಂದು ನಿಮಿಷ ತಡವಾಗಿ ಆಗಮಿಸಿದರೂ ಪರೀಕ್ಷೆಗೆ ಸೇರಿಸಲಾಗುವುದಿಲ್ಲ.

ಎಸ್'ಎಸ್'ಎಲ್ಸಿ ಪರೀಕ್ಷೆ ಪ್ರಾರಂಭವಾಗುವುದು ಬೆಳಿಗ್ಗೆ 9.30 ಗಂಟೆಗೆ. ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳು 9.15ಕ್ಕೆ ಮೊದಲ ಲಾಂಗ್ ಬೆಲ್ ಹೊಡೆದ ನಂತರ ಕಡ್ಡಾಯವಾಗಿ ಪರೀಕ್ಷಾ ಕೊಠಡಿಗೆ ಹಾಜರಾಗಬೇಕು. ಬೆಳಗ್ಗೆ 9.25ಕ್ಕೆ ಎರಡನೇ ಲಾಂಗ್ ಬೆಲ್ ಹೊಡೆಯಲಿದ್ದು ಮುಖ್ಯ ಅಧೀಕ್ಷಕರು ಕೊಠಡಿ ಮೇಲ್ವೀಚಾರಕರ ಕೈಗೆ ಪ್ರಶ್ನೆ ಪತ್ರಿಕೆ ನೀಡುತ್ತಾರೆ. 9.30 ಕ್ಕೆ  ಹೊಡೆಯುವ ಮೂರನೇ ಲಾಂಗ್ ಬೆಲ್'ಗೆ ವಿದ್ಯಾರ್ಥಿಗಳಿಗೆ ಪ್ರಶ್ನೆಪತ್ರಿಕೆ ವಿತರಿಸಲಾಗುತ್ತದೆ. ನಂತರ ಒಂದು ನಿಮಿಷವೂ ತಡವಾಗಿ ಬಂದ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸೇರಿಸಲಾಗುವುದಿಲ್ಲ.

ಮೊದಲೆಲ್ಲ 10,15 ನಿಮಿಷ ತಡವಾಗಿ ಆಗಮಿಸಿದರೂ ಮಾನವೀಯತೆ ದೃಷ್ಟಿಯಿಂದ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸೇರಿಸಲಾಗುತ್ತಿತ್ತು. ಪ್ರಶ್ನೆ ಪತ್ರಿಕೆ ಸೋರಿಕೆ,ಪರೀಕ್ಷೆ ಪಾರದರ್ಶಕವಾಗಿ ನಡೆಯುವ ನಿಟ್ಟಿನಲ್ಲಿ ಈ ನಿಯಮ ಜಾರಿಗೊಳಿಸಲಾಗುತ್ತಿದೆ. ಕರ್ನಾಟಕ ಪ್ರೌಢಶಿಕ್ಷಣ ಮಂಡಳಿಯು ಡಿಡಿಪಿಐಗಳು, ಬಿಇಓಗಳ ಮೂಲಕ ಎಲ್ಲ ಶಾಲೆಗಳಿಗೆ ಸುತ್ತೋಲೆ ಕಳುಹಿಸಿದೆ. ಮಂಡಳಿ ಹೊಸ ನಿಯಮ ಜಾರಿಗೊಳಿಸುವ ಕಾರಣದಿಂದ ವಿದ್ಯಾರ್ಥಿಗಳೆಲ್ಲರೂ ಅರ್ಧ ಗಂಟೆ ಮುಂಚಿತವಾಗಿ ನಿಮ್ಮ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಿ ಇಲ್ಲದಿದ್ದರೆ ಒಂದು ವರ್ಷ ನಿಮ್ಮ ವಿದ್ಯಾರ್ಥ ಜೀವನ ಹಾಳುಗುತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು
ನೆತನ್ಯಾಹು ಪ್ರಧಾನಿ ಮೋದಿಗೆ ಕರೆ ಮಾಡಿ ಮಾತುಕತೆ: ಭಯೋತ್ಪಾದನೆ ವಿರುದ್ಧ ದೊಡ್ಡ ನಿರ್ಧಾರ!