ಮಂಡ್ಯದಲ್ಲಿ ನಡೆಯಿತೊಂದು ಅಮಾನವೀಯ ಘಟನೆ

Published : Jul 05, 2018, 12:25 PM IST
ಮಂಡ್ಯದಲ್ಲಿ ನಡೆಯಿತೊಂದು ಅಮಾನವೀಯ ಘಟನೆ

ಸಾರಾಂಶ

 ಮಂಡ್ಯದಲ್ಲಿ ರೋಗಿಯೊಬ್ಬನನ್ನು ಆಂಬುಲೆನ್ಸ್ ಸಿಗದೇ ಗೂಡ್ಸ್ ಆಟೋದಲ್ಲಿ ಸಾಗಿಸಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.  

ಮಂಡ್ಯ : ಮಂಡ್ಯದಲ್ಲಿ ರೋಗಿಯೊಬ್ಬನನ್ನು ಆಂಬುಲೆನ್ಸ್ ಸಿಗದೇ ಗೂಡ್ಸ್ ಆಟೋದಲ್ಲಿ ಸಾಗಿಸಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ರೈತನೊಬ್ಬ ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ. ಆತನನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲು 108 ಆಂಬುಲೆನ್ಸ್ ಗೆ ಕರೆ ಮಾಡಿದರೆ ಮದ್ದೂರಿನಿಂದ 15 ಕಿಲೋ ಮೀಟರ್ ಇರುವ ಮಂಡ್ಯಕ್ಕೆ ಕರೆತರಲು ಆಂಬುಲೆನ್ಸ್ ಚಾಲಕ ಒಂದೂವರೆ ಸಾವಿರ ಹಣ ಕೇಳಿದ್ದಾನೆ. 

ಬಡ ರೈತ ಕುಟುಂಬ ಅಷ್ಟು ಹಣ ಕೊಡಲಾಗದೇ ಕೇವಲ 200 ರೂ. ಕೊಟ್ಟು ಗೂಡ್ಸ್ ಆಟೋ ಮೂಲಕ ಮಂಡ್ಯಕ್ಕೆ ಗಾಯಾಳುವನ್ನು ಕರೆತಂದಿದ್ದಾರೆ. 

ಇನ್ನು ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸಾಕಷ್ಟು ಅಪಘಾತ ನಡೆದರೂ ಆಂಬುಲೆನ್ಸ್ ಬಾರದ ಕಾರಣ ಎತ್ತಿನ ಗಾಡಿಯಲ್ಲಿ ಗಾಯಾಳುಗಳನ್ನು ಸಾಗಿಸಿದ ಘಟನೆ ಸಹ ನಡೆದಿದ್ದು, ಉಚಿತ ಆಂಬುಲೆನ್ಸ್ ಸೇವೆ ಎಂದು ಆರೋಗ್ಯ ಇಲಾಖೆ ಹೇಳಿದರೂ ಕೂಡ ಆಂಬುಲೆನ್ಸ್ ಚಾಲಕರು ಮಾತ್ರ ಹಣಕ್ಕೆ ಬೇಡಿಕೆ ಇಡುತ್ತಿದ್ದು, ಬಡವರ ಸೇವೆಗೆ ಬರುತ್ತಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೇಂದ್ರದ ಒಪ್ಪಿಗೆ ಸಿಕ್ರೆ ಕೃಷ್ಣ ಮೇಲ್ದಂಡೆ 3ನೇ ಹಂತದ ಪೂರ್ಣಕ್ಕೆ ಬದ್ಧ: ಡಿ.ಕೆ.ಶಿವಕುಮಾರ್‌
Dhurandhar Review: ಹಿಂದೂಗಳಿಗೆ ಪ್ರಥಮ ಶತ್ರು ಹಿಂದೂ-ಮೊಬೈಲ್‌ ಕೂಡ ನೋಡದಂತೆ ಮಾಡೋ Ranveer Singh ಸಿನಿಮಾ!