ವರದಕ್ಷಿಣೆ ಕಿರುಕುಳ ಪ್ರಕರಣ ಇತ್ಯರ್ಥವಾದ ಬಳಿಕವೇ ಬಂಧನ: ಸುಪ್ರೀಂ

Published : Jul 28, 2017, 08:06 PM ISTUpdated : Apr 11, 2018, 12:52 PM IST
ವರದಕ್ಷಿಣೆ ಕಿರುಕುಳ ಪ್ರಕರಣ ಇತ್ಯರ್ಥವಾದ ಬಳಿಕವೇ ಬಂಧನ: ಸುಪ್ರೀಂ

ಸಾರಾಂಶ

ಹೆಣ್ಣುಮಕ್ಕಳ ಮೇಲೆ ವರದಕ್ಷಿಣೆ ಕಿರುಕುಳ ಹೆಚ್ಚಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸುತ್ತಾ, ಇದೇ ನೆಪವಾಗಿಟ್ಟುಕೊಂಡು ಪತಿ ಹಾಗೂ ಅವರ ಮನೆಯವರ ಮೇಲೆ ಸುಳ್ಳು ಕೇಸ್ ಹಾಕುತ್ತಿರುವ ಪ್ರಕರಣಗಳ ಬಗ್ಗೆ ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿದೆ.

ನವದೆಹಲಿ (ಜು.28): ಹೆಣ್ಣುಮಕ್ಕಳ ಮೇಲೆ ವರದಕ್ಷಿಣೆ ಕಿರುಕುಳ ಹೆಚ್ಚಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸುತ್ತಾ, ಇದೇ ನೆಪವಾಗಿಟ್ಟುಕೊಂಡು ಪತಿ ಹಾಗೂ ಅವರ ಮನೆಯವರ ಮೇಲೆ ಸುಳ್ಳು ಕೇಸ್ ಹಾಕುತ್ತಿರುವ ಪ್ರಕರಣಗಳ ಬಗ್ಗೆ ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿದೆ.

ನ್ಯಾ. ಎ.ಕೆ ಗೋಯಲ್ ಮತ್ತು ಯುಯು ಲಲಿತ್ ನೇತೃತ್ವದ ನ್ಯಾಯಪೀಠವು, ಗಂಡ ಹಾಗೂ ಅವರ ಮನೆಯವರ ಹಕ್ಕನ್ನು ಎತ್ತಿ ಹಿಡಿಯುತ್ತಾ, ಅವರ ಮೇಲೆ ಕ್ರಮ ಕೈಗೊಳ್ಳುವ ಮೊದಲು ಸುಳ್ಳು ಪ್ರಕರಣಗಳನ್ನು ಪರಿಶೀಲಿಸಬೇಕಾಗಿರುವ ಸಮಯ ಇದಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪ್ರತಿಯೊಂದು ಜಿಲ್ಲೆಯಲ್ಲಿಯೂ ಕುಟುಂಬ ಕಲ್ಯಾಣ ಸಮಿತಿಯನ್ನು ರಚಿಸಿ ಅಲ್ಲಿಗೆ ಬರುವ ಪ್ರತಿಯೊಂದು ದೂರನ್ನು ಪರಿಶೀಲನೆ ನಡೆಸಬೇಕೆಂದು ಸುಪ್ರೀಂಕೋರ್ಟ್ ಎಲ್ಲಾ ರಾಜ್ಯಗಳಿಗೂ ಸೂಚಿಸಿದೆ.

ಇದೊಂದು ಗಂಭೀರ ವಿಚಾರವಾಗಿದ್ದು, ಸೆಕ್ಷನ್ 498ಎ ಅಡಿಯಲ್ಲಿ ಸಾಕಷ್ಟು ವಿವಾಹಿತ ಮಹಿಳೆಯ ಮೇಲಿನ ವರದಕ್ಷಿಣೆ ಪ್ರಕರಣಗಳ ದಾಖಲಾಗಿವೆ. ಅದರಲ್ಲಿ ಅನೇಕ ಪ್ರಕರಣಗಳು ನಂಬಲರ್ಹವಾಗಿಲ್ಲ. ಕೇಸ್ ದಾಖಲಿಸುವಾಗ ಪರಿಣಾಮಗಳ ಬಗ್ಗೆ ಅರಿವಿರುವುದಿಲ್ಲ. ಅಂತಹ ಸಂದರ್ಭದಲ್ಲಿ ಆ ಕೇಸನ್ನು ಹಾಗೂ ಆರೋಪಿಯನ್ನು ಅನೂರ್ಜಿತಗೊಳಿಸಲಾಗುತ್ತದೆ. ಪತಿ ಹಾಗೂ ಅವನ ಮನೆಯವರಿಗೆ ಜಾಮೀನು ನೀಡಬೇಕೋ ಬೇಡವೋ ಎನ್ನುವ ಬಗ್ಗೆ ವಿಚಾರಣಾಧೀನ ನ್ಯಾಯಾಲಯಗಳು ಕೇಸ್ ದಾಖಲಾದ ದಿನವೇ ನಿರ್ಧರಿಸಬೇಕು. ಪತಿಯ ಮನೆಯವರು ವಿಚಾರಣೆಗೊಳಪಡಬೇಕು ಎಂದು ಒತ್ತಾಯಿಸುವಂತಿಲ್ಲ ಎಂದು ಕೋರ್ಟ್ ಹೇಳಿದೆ.

(ಸಾಂದರ್ಭಿಕ ಚಿತ್ರ)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಯಮಾಡಿ ಅರ್ಥ ಮಾಡಿಕೊಳ್ಳಿ ತಪ್ಪು ತಿಳಿಯಬೇಡಿ: ಸೋದರನ ಪೋಸ್ಟ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ
25 ಜನರ ಬಲಿ ಪಡೆದ ಗೋವಾ ಕ್ಲಬ್ ಬೆಂಕಿ ದುರಂತ ಸಂಭವಿಸಿದ ಕೆಲ ಗಂಟೆಗಳಲ್ಲೇ ಥೈಲ್ಯಾಂಡ್‌ಗೆ ಹಾರಿದ ಕ್ಲಬ್ ಮಾಲೀಕ