ಆರೋಪಿಗಳು ಗಣ್ಯ ವ್ಯಕ್ತಿಗಳಾದ ಕಾರಣ ಸಾಕ್ಷಿ ನಾಶ ಪಡಿಸುವ ಸಾಧ್ಯತೆಯಿದೆ. ಆದ ಕಾರಣ ನ್ಯಾಯಾಂಗ ಬಂಧನಕ್ಕೆ ಒಳಪಡಿಸಬೇಕೆಂದು ಡಿಫೆನ್ಸ್ ವಕೀಲರು ವಾದಿಸಿದ್ದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ಮಹೇಶ್ ನಾಲ್ವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಆದೇಶಿಸಿದ್ದಾರೆ.
ಬೆಂಗಳೂರು[ಸೆ.23]: ಜಿಮ್ ಟ್ರೖನರ್ ಮಾರುತಿ ಗೌಡ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್ ಹಾಗೂ ಮೂವರು ಸಹಚರರಿಗೆ 8ನೇ ಎಸಿಎಂಎಂ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಆರೋಪಿಗಳು ಗಣ್ಯ ವ್ಯಕ್ತಿಗಳಾದ ಕಾರಣ ಸಾಕ್ಷಿ ನಾಶ ಪಡಿಸುವ ಸಾಧ್ಯತೆಯಿದೆ. ಆದ ಕಾರಣ ನ್ಯಾಯಾಂಗ ಬಂಧನಕ್ಕೆ ಒಳಪಡಿಸಬೇಕೆಂದು ಡಿಫೆನ್ಸ್ ವಕೀಲರು ವಾದಿಸಿದ್ದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ಮಹೇಶ್ ನಾಲ್ವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಆದೇಶಿಸಿದ್ದಾರೆ. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ಮಹೇಶ್ ನಾಲ್ವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಆದೇಶಿಸಿದ್ದಾರೆ. ಜಾಮೀನು ಅರ್ಜಿಯನ್ನು ನಾಳೆಗೆ ಮುಂದೂಡಲಾಗಿದೆ.
ವಸಂತ್ ನಗರದಲ್ಲಿರುವ ಅಂಬೇಡ್ಕರ್ ನಗರದ ಮೇಲೆ ಮಾಜಿ ಸೈನಿಕರ ಪುತ್ರರಾದ ಜಿಮ್ ಟ್ರೈನರ್ ಮಾರುತಿ ಗೌಡ ಎಂಬುವವರಿಗೆ ನಟ ದುನಿಯಾ ವಿಜಯ್ ಸೇರಿದಂತೆ ನಾಲ್ವರು ಮನಬಂದಂತೆ ಹಲ್ಲೆ ನಡೆಸಿದ್ದರು. ಗಾಯಗೊಂಡಿರುವ ಮಾರುತಿ ಗೌಡ ವಿಕ್ರಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.