ನಲಪಾಡ್’ಗೆ ಬೇಲು ಸಿಗಲಿಲ್ಲ, ಮತ್ತೆ ಜೈಲಿಗೆ

Published : Feb 21, 2018, 04:10 PM ISTUpdated : Apr 11, 2018, 12:58 PM IST
ನಲಪಾಡ್’ಗೆ ಬೇಲು ಸಿಗಲಿಲ್ಲ, ಮತ್ತೆ ಜೈಲಿಗೆ

ಸಾರಾಂಶ

ಉದ್ಯಮಿ ಪುತ್ರ ವಿದ್ಯತ್ ಮೇಲೆ ಹಲ್ಲೆ ನಡೆಸಿದ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್’ಗೆ ನ್ಯಾಯಾಧೀಶರು ಜಾಮೀನು ಅರ್ಜಿ ನಿರಾಕರಿಸಿದ್ದು  ಮತ್ತೆ 14 ದಿನಗಳ ಕಾಲ ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ.

ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿ ಪೊಲೀಸ್ ವಶದಲ್ಲಿರುವ ಶಾಂತಿ ನಗರ ಶಾಸಕ ಎನ್.ಎ. ಹ್ಯಾರೀಸ್ ಪುತ್ರ ಮೊಹಮದ್ ನಲಪಾಡ್’ಗೆ ಹಾಗೂ ಆತನ ಸಹಚರರಿಗೆ ಸಿಟಿ ಸಿವಿಲ್ ಕೋರ್ಟ್ ಜಾಮೀನು ಅರ್ಜಿ ನಿರಾಕರಿಸಿದ್ದು ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನದ ವಶಕ್ಕೆ ನೀಡಲಾಗಿದೆ.

2 ದಿನಗಳ ಕಾಲ ಕಬ್ಬನ್ ಪಾರ್ಕ್ ಪೊಲೀಸ್ ವಶದಲ್ಲಿದ್ದ ನಲಪಾಡ್ ಹಾಗೂ 7 ಮಂದಿ ಸಹಚರರರನ್ನು ಬೌರಿಂಗ್ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ ನಂತರ 63ನೇ ಸಿಟಿ ಸಿವಿಲ್ ಸೆಷನ್ಸ್ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿ ಮಾರ್ಚ್ 7 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.ಆರೋಪಿ ಪ್ರಭಾವಿಯೊಬ್ಬರ ಪುತ್ರರಾಗಿದ್ದು ಸರ್ಕಾರಿ ಅಭಿಯೋಜಕರು ಕೂಡ ಸರ್ಕಾರದ ಒಂದು ಭಾಗ ಹೀಗಾಗಿ ನಿಷ್ಪಕ್ಷಪಾತ ತನಿಖೆ ನಡೆಸುವುದು ಅನುಮಾನ ಎಂದು  ಆಲಂ ಪಾಷ ಎಂಬುವವರು ಮನವಿ ಸಲ್ಲಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆಳಸಮುದ್ರ ಡ್ರೋನ್‌ ಬಳಸಿದ ಉಕ್ರೇನ್‌ : ರಷ್ಯಾ ಸಬ್‌ಮರೀನ್‌ ಧ್ವಂಸ
ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು