ಚುನಾವಣೆಗೆ ಮತ ಪತ್ರ ಬಳಸಲ್ಲ: ಚುನಾವಣಾ ಆಯೋಗ

Published : Jan 10, 2018, 10:55 AM ISTUpdated : Apr 11, 2018, 12:45 PM IST
ಚುನಾವಣೆಗೆ ಮತ ಪತ್ರ ಬಳಸಲ್ಲ: ಚುನಾವಣಾ ಆಯೋಗ

ಸಾರಾಂಶ

ಇವಿಎಂನಲ್ಲಿ ದೋಷ ಇದೆ ಎಂದು ನೆದರ್‌'ಲ್ಯಾಂಡ್, ಅಮೆರಿಕ ದೇಶದಲ್ಲಿ ಪತ್ತೆ ಹಚ್ಚಲಾಗಿದೆ. ಈ ಹಿನ್ನೆಲೆಯಲ್ಲಿ ಹಲವು ದೇಶಗಳು ಇವಿಎಂ ಬಳಕೆ ಕೈಬಿಟ್ಟಿವೆ. ಸಂಶಯಗಳಿಗೆ ಅವಕಾಶ ನೀಡದಂತೆ ಚುನಾವಣೆ ನಡೆಸಬೇಕಾದರೆ ಇವಿಎಂ ದೋಷ ನಿವಾರಿಸಬೇಕು. ಇಲ್ಲವೇ ಬ್ಯಾಲೆಟ್ ಪೇಪರ್ ಬಳಸಬೇಕು ಎಂದು ಒತ್ತಾಯಿಸಲಾಯಿತು.

ಬೆಂಗಳೂರು(ಜ.10): ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಮಾಡಲು ಕೇಂದ್ರ ಚುನಾವಣಾ ಆಯೋಗವು ನಿರಾಕರಿಸಿದ್ದು, ಇವಿಎಂ ಯಂತ್ರಗಳ ಮೂಲಕವೇ ಚುನಾವಣೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದೆ.

ವಿಕಾಸಸೌಧದಲ್ಲಿ ರಾಜಕೀಯಪಕ್ಷಗಳ ಜತೆ ನಡೆಸಿದ ಸಭೆಯಲ್ಲಿ ಬಿಜೆಪಿ ಹೊರತುಪಡಿಸಿ ಕಾಂಗ್ರೆಸ್, ಜೆಡಿಎಸ್, ಬಿಎಸ್‌ಪಿ ಸೇರಿದಂತೆ ಮತ್ತಿತರ ಪಕ್ಷಗಳು ಇವಿಎಂ ಯಂತ್ರಗಳ ಬದಲು ಬ್ಯಾಲೆಟ್ ಪೇಪರ್ ಬಳಕೆ ಮಾಡಬೇಕು ಎಂದು ಮನವಿ ಮಾಡಿದವು. ಆದರೆ, ಈ ಮನವಿಯನ್ನು ತಿರಸ್ಕರಿಸಿದ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳು, ಸುಪ್ರಿಂಕೋರ್ಟ್ ಇವಿಎಂ ದಕ್ಷತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ. ಹೀಗಾಗಿ ಅದನ್ನು ಬದಲಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ರಾಜ್ಯ ಚುನಾವಣೆ ಸಂದರ್ಭದಲ್ಲಿ ಇವಿಎಂ ನಿಷೇಧ ಮಾಡಬೇಕು. ಇವಿಎಂ ದುರ್ಬಳಕೆ ಕುರಿತು ಆರೋಪ ಕೇಳಿ ಬಂದಿರುವುದರಿಂದ ತಂತ್ರಜ್ಞರು, ವಿಜ್ಞಾನಿಗಳಿಗೆ ಅದರಲ್ಲಿನ ದೋಷ ಪತ್ತೆ ಹಚ್ಚಲು ಅವಕಾಶ ನೀಡಬೇಕು ಎಂದು ಸಭೆಯಲ್ಲಿ ಕಾಂಗ್ರೆಸ್‌'ನ ನಾಯಕರು ಮನವಿ ಮಾಡಿದರು. ಇದಕ್ಕೆ ಇತರೆ ಪಕ್ಷಗಳ ನಾಯಕರು ಧ್ವನಿಗೂಡಿಸಿದರು. ಇವಿಎಂನಲ್ಲಿ ದೋಷ ಇದೆ ಎಂದು ನೆದರ್‌'ಲ್ಯಾಂಡ್, ಅಮೆರಿಕ ದೇಶದಲ್ಲಿ ಪತ್ತೆ ಹಚ್ಚಲಾಗಿದೆ. ಈ ಹಿನ್ನೆಲೆಯಲ್ಲಿ ಹಲವು ದೇಶಗಳು ಇವಿಎಂ ಬಳಕೆ ಕೈಬಿಟ್ಟಿವೆ. ಸಂಶಯಗಳಿಗೆ ಅವಕಾಶ ನೀಡದಂತೆ ಚುನಾವಣೆ ನಡೆಸಬೇಕಾದರೆ ಇವಿಎಂ ದೋಷ ನಿವಾರಿಸಬೇಕು. ಇಲ್ಲವೇ ಬ್ಯಾಲೆಟ್ ಪೇಪರ್ ಬಳಸಬೇಕು ಎಂದು ಒತ್ತಾಯಿಸಲಾಯಿತು.

ಇದಕ್ಕೆ ಸೊಪ್ಪು ಹಾಕದ ಕೇಂದ್ರ ಚುನಾವಣಾ ಅಧಿಕಾರಿಗಳು ಚುನಾವಣೆಯಲ್ಲಿ ಸೋಲುವ ಪಕ್ಷಗಳು ಇಂತಹ ಆರೋಪ ಮಾಡುವುದು ಸಹಜ. ಇವಿಎಂ ಯಂತ್ರಗಳ ಮೂಲಕವೇ ಚುನಾವಣೆ ನಡೆಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಲಾರ: ಅಪ್ಪ- ಅಮ್ಮನ ವಿಚ್ಚೇಧನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!
ಟೊಯೋಟಾ ಹೈಡ್ರೋಜನ್ ಕಾರು ಮೂಲಕ ಸಂಸತ್‌ಗೆ ಬಂದ ಪ್ರಹ್ಲಾದ್ ಜೋಶಿ, ಇದರ ಲಾಭವೇನು?