
ಬೆಂಗಳೂರು (ಏ.22): ನಟ ಸತ್ಯರಾಜ್ ಕೇಳಿರುವ ವಿಷಾದ ಹಾಗೂ ಕ್ಷಮೆಯಾಚನೆ ಹಿನ್ನೆಲೆಯಲ್ಲಿ ಹೋರಾಟವನ್ನು ಹಿಂಪಡೆಯಲು ನಿರ್ಧರಿಸಿದ್ದೇವೆ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.
ತಮಿಳುನಾಡಿನಲ್ಲಿ ಕನ್ನಡ ಸಿನಿಮಾಗಳು ಸ್ಥಗಿತಗೊಳಿಸಿದರೆ ಕರ್ನಾಟಕದ ಎಲ್ಲಾ ಚಿತ್ರಮಂದಿರಗಳಲ್ಲಿ ತಮಿಳು ಸಿನಿಮಾಗಳು ಸ್ಥಗಿತಗೊಳಿಸುತ್ತೇವೆ ಎಂದು ಈ ಸಂದರ್ಭದಲ್ಲಿ ವಾಟಾಳ್ ಹೇಳಿದ್ದಾರೆ.
ಇನ್ಮುಂದೆ ಸತ್ಯರಾಜ್ ಎಲ್ಲಿಯೂ ಹೀಗೆ ಮಾತನಾಡಬಾರದು, ಮಾತನಾಡುವ ಮುನ್ನ ಎಚ್ಚರಿಕೆಯಿಂದ ಹೇಳಿಕೆ ನೀಡಬೇಕು, ಇಲ್ಲದಿದ್ದರೆ ಸತ್ಯರಾಜ್ ಅಭಿನಯದ ಚಿತ್ರಗಳಿಗೆ ನಿಷೇಧ ಹಾಕಲಾಗುತ್ತೆ, ಎಂದು ವಾಟಾಳೆ ಎಚ್ಚರಿಸಿದ್ದಾರೆ.
ಕನ್ನಡಪರ ಸಂಘಟನೆಗಳ ಈ ನಿರ್ಧಾರದೊಂದಿಗೆ ಬಾಹುಬಲಿ-2 ಸಿನಿಮಾ 28ರಂದು ಕರ್ನಾಟಕದಲ್ಲಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.