
ಬೆಂಗಳೂರು (ಫೆ.26): ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಕಾಂಗ್ರೆಸ್ ಸಮನ್ವಯ ಸಮಿತಿ ಸಭೆ ನಡೆದಿದ್ದು, ಕೆಲ ನಿರ್ಧಾರಗಳನ್ನು ಕೈಗೊಳ್ಳಲಾಯಿತು.
ಮೊದಲನೆಯದಾಗಿ ಹಿರಿಯ ಸಚಿವರನ್ನು ಸಂಪುಟದಿಂದ ಕೈಬಿಡದಿರಲು ನಿರ್ಧರಿಸಲಾಯ್ತು. ಒಂದು ವೇಳೆ ಸಂಪುಟದಿಂದ ಸಚಿವರನ್ನು ಕೈಬಿಟ್ಟರೆ, ಆಡಳಿತ ಯಂತ್ರ ಹಿಡಿತ ತಪ್ಪಿ, ಮತ್ತೆ ಅಸಮಾಧಾನ, ಗೊಂದಲ ಸೃಷ್ಟಿಯಾಗಲಿದೆ. ಹಾಗಾಗಿ ಸಂಪುಟ ಪುನಾರಚನೆ ಸಾಹಸ ಬೇಡ ಎಂದು ನಿರ್ಧರಿಸಲಾಯ್ತು.
ಖಾಲಿ ಇರುವ ಎರಡು ಸಚಿವ ಸ್ಥಾನಗಳಿಗೆ ನೇಮಕ ಮಾಡಲು ಸಹಮತ ವ್ಯಕ್ತವಾಯ್ತು. ಇದುವರೆಗೆ ಈಡೇರಿಸದ ಆಶ್ವಾಸನೆಗಳ ಬಗ್ಗೆ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸಲಾಯ್ತು. ಕೆಪಿಸಿಸಿ ಹೊಸ ಸ್ವರೂಪ ಕೋಡುವುದಾಗಿ ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ದಿಗ್ವಿಜಯ್ ಸಿಂಗ್ ಸುಳಿವು ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.