ಮತ್ತೆ ಎಟಿಎಂಗಳಲ್ಲಿ ಹಣ ಸಿಗುತ್ತಿಲ್ಲ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಮಸ್ಯೆ

Published : Apr 10, 2017, 02:38 PM ISTUpdated : Apr 11, 2018, 01:02 PM IST
ಮತ್ತೆ ಎಟಿಎಂಗಳಲ್ಲಿ ಹಣ ಸಿಗುತ್ತಿಲ್ಲ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಮಸ್ಯೆ

ಸಾರಾಂಶ

ಎಟಿಎಂಗಳಿಗೆ ಅಗತ್ಯವಿರುವ ಹಣವನ್ನು ಭರ್ತಿ ಮಾಡಲು ಬ್ಯಾಂಕ್​ಗಳಿಗೆ ಸಾಧ್ಯವಾಗುತ್ತಿಲ್ಲ. ಹಳೆಯ ನೋಟುಗಳ ನಿಷೇಧ ಸಂದರ್ಭದಲ್ಲಿ ದಿನದ 24 ಗಂಟೆ ನೋಟು ಮುದ್ರಣದಲ್ಲಿ ತೊಡಗಿದ್ದ ಸಿಬ್ಬಂದಿ ಈಗ ಕೇವಲ ಒಂದೇ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಬೆಂಗಳೂರು(ಏ.10): ಭಾರತೀಯ ರಿಸರ್ವ್‌ ಬ್ಯಾಂಕ್‌ನಲ್ಲಿ ನೋಟುಗಳ ಮುದ್ರಣ ನಿರೀಕ್ಷಿತ ಮಟ್ಟದಲ್ಲಿ ನಡೆಯದೆ ಇರುವುದರಿಂದ ಬ್ಯಾಂಕ್‌ಗಳಿಗೆ ಅಗತ್ಯ ಪ್ರಮಾಣದಲ್ಲಿ  ನೋಟುಗಳ ಸರಬರಾಜು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಬಹುತೇಕ  ರಾಷ್ಟ್ರೀಕೃತ ಬ್ಯಾಂಕ್‌ಗಳು ನೋಟಿನ ಅಭಾವವನ್ನು ಎದುರಿಸುತ್ತಿವೆ.

ಎಟಿಎಂಗಳಿಗೆ ಅಗತ್ಯವಿರುವ ಹಣವನ್ನು ಭರ್ತಿ ಮಾಡಲು ಬ್ಯಾಂಕ್​ಗಳಿಗೆ ಸಾಧ್ಯವಾಗುತ್ತಿಲ್ಲ. ಹಳೆಯ ನೋಟುಗಳ ನಿಷೇಧ ಸಂದರ್ಭದಲ್ಲಿ ದಿನದ 24 ಗಂಟೆ ನೋಟು ಮುದ್ರಣದಲ್ಲಿ ತೊಡಗಿದ್ದ ಸಿಬ್ಬಂದಿ ಈಗ ಕೇವಲ ಒಂದೇ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬ್ಯಾಂಕ್‌ಗಳ ಬೇಡಿಕೆಗೆ ಅನುಗುಣವಾಗಿ ನೋಟು ಮುದ್ರಿಸಿ ಸರಬರಾಜು ಮಾಡಲು, ಆರ್‌ಬಿಐ ವಿಫ‌ಲವಾಗಿರುವುದು ಎಟಿಎಂಗಳಲ್ಲಿ ಹಣಕಾಸಿನ ಕೊರತೆಗೆ ಪ್ರಮುಖ ಕಾರಣ ಎನ್ನಲಾಗುತ್ತಿದೆ.

ಈ ಮೊದಲು ಅಗತ್ಯಕ್ಕೆ ತಕ್ಕಂತೆ ಜನ ಎಟಿಎಂಗಳಿಂದ ಹಣ ಡ್ರಾ ಮಾಡುತ್ತಿದ್ದರು. ಆದರೆ, ಇತ್ತೀಚೆಗೆ  ಡ್ರಾಮಿತಿ ವಿಧಿಸಿ, ಶುಲ್ಕ ವಿಧಿಸಲಾಗುತ್ತಿರುವದರಿಂದ ಒಮ್ಮೆಗೆ ಹೆಚ್ಚು ಹಣ ಡ್ರಾ ಮಾಡ್ತಿದ್ದಾರೆ. ಹಣಕ್ಕಾಗಿ ಮತ್ತೆ ಜನರ ಪರದಾಟ ಮುಂದುವರಿದಿದ್ದು  ಬಹುತೇಕ ಎಟಿಎಂಗಳ ಮುಂದೆ ನೋ ಕ್ಯಾಷ್ ಬೋರ್ಡ್​ ಕಾಣುತ್ತಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗ್ರೀನ್ ಕಾರ್ಡ್ ಸಂದರ್ಶನದ ವೇಳೆ 30 ವರ್ಷಗಳಿಂದ ಅಮೆರಿಕಾದಲ್ಲಿ ವಾಸವಿದ್ದ ಭಾರತೀಯ ಮಹಿಳೆಯ ಬಂಧನ
ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?