ಬೆಂಗಳೂರಿನಲ್ಲಿ ಮತ ಎಣಿಕೆ ದಿನದಂದು ನೀರು ಪೂರೈಕೆಯಲ್ಲಿ ವ್ಯತ್ಯಯ

Published : May 13, 2018, 12:34 PM IST
ಬೆಂಗಳೂರಿನಲ್ಲಿ ಮತ ಎಣಿಕೆ ದಿನದಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಸಾರಾಂಶ

ಕಾವೇರಿ ನೀರನ್ನು ಅವಲಂಬಿಸಿರುವ ಬೆಂಗಳೂರಿಗರೇ ಎಚ್ಚರ. ಮತ ಎಣಿಕೆ ದಿನ ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.  ಮೇ 15ರ ಮಂಗಳವಾರ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಅಂದು ಅರ್ಧದಷ್ಟು ಬೆಂಗಳೂರಿಗೆ ಅಂದು ಕಾವೇರಿ ನೀರು ಪೂರೈಕೆಯಾಗುವುದಿಲ್ಲ. 

ಬೆಂಗಳೂರು (13) :  ಕಾವೇರಿ ನೀರನ್ನು ಅವಲಂಬಿಸಿರುವ ಬೆಂಗಳೂರಿಗರೇ ಎಚ್ಚರ. ಮತ ಎಣಿಕೆ ದಿನ ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.  

ಮೇ 15ರ ಮಂಗಳವಾರ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಅಂದು ಅರ್ಧದಷ್ಟು ಬೆಂಗಳೂರಿಗೆ ಕಾವೇರಿ ನೀರು ಪೂರೈಕೆಯಾಗುವುದಿಲ್ಲ. ಟಿ ಕೆ ಹಳ್ಳಿ, ಹಾರೋಹಳ್ಳಿ, ಮತ್ತು ತಾತಗುಣಿಯಲ್ಲಿ ಯಂತ್ರಾಗಾರಗಳ ಉನ್ನತೀಕರಣ ಹಿನ್ನೆಲೆಯಲ್ಲಿ ನೀರು ಪೂರೈಕೆಯನ್ನು ಸ್ಥಗಿತ ಮಾಡಲಾಗುತ್ತಿದೆ.  

ಮೇ 15 ರಂದು ಬೆಳಗ್ಗೆ 8 ರಿಂದ 4 ಗಂಟೆಯವರೆಗೂ ಕೂಡ ನೀರು ಪುರೈಕೆಯಲ್ಲಿ ಸಮಸ್ಯೆ ಉಂಟಾಗಲಿದೆ. ಆದ್ದರಿಂದ ಬೆಂಗಳೂರಿನ ನಾಗರಿಕರು ಪರ್ಯಾಯ ವ್ಯವಸ್ಥೆ ಮಾಡಿಕೊಂಡು, ಇದಕ್ಕೆ ಸಹಕರಿಸುವಂತೆ ಬೆಂಗಳೂರು ಜಲಮಂಡಳಿ ಮನವಿ ಮಾಡಿದೆ. 

ಪ್ರಮುಖವಾಗಿ ಅಂದು ನೀರು ಪೂರೈಕೆಯಾಗದ ಪ್ರಮುಖ ಕ್ಷೇತ್ರಗಳೆಂದರೆ ಜಯನಗರ, ಜೆ ಪಿ ನಗರ ಬಸವನಗುಡಿ, ಕೆ ಎಸ್ ಲೇಔಟ್, ಬನಶಂಕರಿ, ದೊಮ್ಮಲೂರು, ಬಿಟಿಎಂಲೇಔಟ್, ಇಂದಿರಾ ನಗರ, ಶಾಂತಿನಗರ , ಕೋರಮಂಗಲ, ವಿಜಯನಗರ, ಮತ್ತಿಕೆರೆ, ಮಲ್ಲೇಶ್ವರಂ, ಆರ್ ಟಿ ನಗರ ಮಡಿವಾಳ, ಯಲಚೇನಹಳ್ಳಿ, ಕಸ್ತೂರಿ ಬಾ ರಸ್ತೆ, ಮೆಜೆಸ್ಟಿಕ್, ಸದಾಶಿವನಗರ, ಸೇರಿದಂತೆ ಹಲವೆಡೆ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

10 ದಿನ ನಡೆದ ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ತೆರೆ
ಗ್ಯಾರಂಟಿಯಿಂದಾಗಿ ತಲಾ ಆದಾಯದಲ್ಲಿ ರಾಜ್ಯ ನಂ.1 : ಸಿದ್ದರಾಮಯ್ಯ