
ಔರಂಗಾಬಾದ್: ‘ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗೆ ಏಕಕಾಲದಲ್ಲಿ ಚುನಾವಣೆ ನಡೆಯಲು ಸಾಧ್ಯವಿಲ್ಲ’ ಎಂದು ಮುಖ್ಯ ಚುನಾವಣಾ ಆಯುಕ್ತ ಓಂಪ್ರಕಾಶ್ ರಾವತ್ ಪುನರುಚ್ಚರಿಸಿದ್ದಾರೆ.
ಔರಂಗಾಬಾದ್ಗೆ ಗುರುವಾರ ಆಗಮಿಸಿದ್ದ ಅವರನ್ನು ಸುದ್ದಿಗಾರರು ಏಕಕಾಲದ ಚುನಾವಣೆ ಬಗ್ಗೆ ಪ್ರಶ್ನಿಸಿದರು. ಆಗ ರಾವತ್ ಅವರು ‘ಕೋಯಿ ಚಾನ್ಸ್ ನಹಿ’ (ಯಾವುದೇ ಸಾಧ್ಯತೆ ಇಲ್ಲ) ಎಂದು ಚುಟುಕಾಗಿ ಉತ್ತರಿಸಿದರು.
ಇತ್ತೀಚೆಗೆ ಮಾಧ್ಯಮ ಸಂದರ್ಶನ ವೇಳೆಯೂ ಇದೇ ಮಾತನ್ನು ಹೇಳಿದ್ದ ರಾವತ್, ‘ಏಕಕಾಲದ ಚುನಾವಣೆ ನಡೆಸಲು ಸಾಂವಿಧಾನಿಕ ತಿದ್ದುಪಡಿ ಆಗಬೇಕು. ಹೀಗಾಗಿ ಸದ್ಯದ ಮಟ್ಟಿಗೆ ಇದು ನೆರವೇರದು’ ಎಂದಿದ್ದರು.
ಮುಂದಿನ ಲೋಕಸಬೆ ಚುನಾವಣೆ ಂಏನಲ್ಲಿ ನಡೆಯಲಿದೆ. ಇನ್ನು ಮಧ್ಯಪ್ರದೇಶ, ಛತ್ತೀಸ್ಗಢ, ರಾಜಸ್ಥಾನ ಹಾಗೂ ಮಿಜೋರಂ ಚುನಾವಣೆಗಳು ವರ್ಷಾಂತ್ಯಕ್ಕೆ ನಡೆಯಬೇಕಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.