ದಿನೇಶ್ ಗುಂಡೂರಾವ್’ಗೆ ಪೈಪೋಟಿ ನೀಡುವವರೇ ಇಲ್ಲವಂತೆ..!

Published : Mar 03, 2018, 12:00 PM ISTUpdated : Apr 11, 2018, 12:54 PM IST
ದಿನೇಶ್  ಗುಂಡೂರಾವ್’ಗೆ ಪೈಪೋಟಿ ನೀಡುವವರೇ ಇಲ್ಲವಂತೆ..!

ಸಾರಾಂಶ

ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಹಾಲಿ ಶಾಸಕ ದಿನೇಶ್ ಗುಂಡೂರಾವ್ ಅವರೇ ಕಾಂಗ್ರೆಸ್ಸಿನ ಅಭ್ಯರ್ಥಿಯಾಗಿ ಮತ್ತೊಮ್ಮೆ ಕಣಕ್ಕಿಳಿಯಲಿದ್ದಾರೆ. ಅವರಿಗೆ ಪ್ರಬಲ ಪೈಪೋಟಿ ನೀಡುವ ಸಮರ್ಥ  ಅಭ್ಯರ್ಥಿಗಳ ಕೊರತೆ ಬಿಜೆಪಿ ಮತ್ತು ಜೆಡಿಎಸ್‌ಗಳನ್ನು ಕಾಡುತ್ತಿದೆ.

ಗಾಂಧಿನಗರ : ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಹಾಲಿ ಶಾಸಕ ದಿನೇಶ್ ಗುಂಡೂರಾವ್ ಅವರೇ ಕಾಂಗ್ರೆಸ್ಸಿನ ಅಭ್ಯರ್ಥಿಯಾಗಿ ಮತ್ತೊಮ್ಮೆ ಕಣಕ್ಕಿಳಿಯಲಿದ್ದಾರೆ. ಅವರಿಗೆ ಪ್ರಬಲ ಪೈಪೋಟಿ ನೀಡುವ ಸಮರ್ಥ  ಅಭ್ಯರ್ಥಿಗಳ ಕೊರತೆ ಬಿಜೆಪಿ ಮತ್ತು ಜೆಡಿಎಸ್‌ಗಳನ್ನು ಕಾಡುತ್ತಿದೆ.

ಬಿಜೆಪಿಯಿಂದ ಬಿಬಿಎಂಪಿ ಮಾಜಿ ಸದಸ್ಯ ಎ. ಎಲ್. ಶಿವಕುಮಾರ್, ಎಂ.ಬಿ.ಶಿವಪ್ಪ, ನಿವೃತ್ತ ಪೊಲೀಸ್ ಅಧಿಕಾರಿ ಗಂಗಾಧರ್ ಹೆಸರುಗಳು ಚಾಲ್ತಿಯಲ್ಲಿವೆ. ಈ ಪೈಕಿ ಶಿವಕುಮಾರ್ ಬಗ್ಗೆ ಸಂಘ ಪರಿವಾರ ಒಲವು ಹೊಂದಿದೆ. ಕಾಂಗ್ರೆಸ್ ನಿಂದ ವಲಸೆ ಬಂದಿರುವ ಶಿವಪ್ಪ ಯಡಿಯೂರಪ್ಪ ಅವರೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ.

ಆದರೆ, ಸ್ಥಳೀಯ ಸಂಸದ ಹಾಗೂ ಗಾಂಧಿನಗರ ಕ್ಷೇತ್ರದಲ್ಲಿ ಪ್ರಭಾವ ಹೊಂದಿರುವ ಪಿ.ಸಿ. ಮೋಹನ್ ಅವರು ಶಿವಪ್ಪ ಅವರಿಗಿಂತ ಶಿವಕುಮಾರ್‌ರನ್ನು ಬೆಂಬಲಿಸಬಹುದೆಂಬ ಮಾತು ಕೇಳಿಬರುತ್ತಿದೆ. ಜೆಡಿಎಸ್‌ನಿಂದ ಸ್ಥಳೀಯ ಮುಖಂಡ ನಾರಾಯಣಸ್ವಾಮಿ ಅವರಿಗೆ ಟಿಕೆಟ್ ಘೋಷಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!