
ಬೆಂಗಳೂರು (ಜ.05): ಹೊಸ ವರ್ಷದ ರಾತ್ರಿ ನಡೆದ ಘಟನೆಗಳು ದುರದೃಷ್ಟಕರ ಎಂದು ಬಣ್ಣಿಸಿರುವ ಗೃಹಮಂತ್ರಿ ಪರಮೇಶ್ವರ್, ಮಹಿಳೆಯರ ಭದ್ರತೆ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾದ್ಯಮದವರೊಂದಿಗೆ ಮಾತನಾಡಿದ ಪರಮೇಶ್ವರ್, ಘಟನೆ ಸಂಬಧಿಸಿ ಈಗಾಗಲೇ ನಾಲ್ವರನ್ನು ಬಂಧಿಸಲಾಗಿದೆ ಎಂದಿದ್ದಾರೆ.
ಬೆಂಗಳೂರಿನ ಬಗ್ಗೆ ಇರುವ ಚಿತ್ರಣವನ್ನು ಬದಲಾಗಲು ಬಿಡುವುದಿಲ್ಲ, ಬೇರೆ ರೀತಿಯಲ್ಲಿ ಬೆಂಗಳೂರನ್ನು ತೋರಿಸುವ ಯತ್ನ ನಡೆಸವುದು ಬೇಡ ಎಂದು ಹೇಳಿದ್ದಾರೆ.
ಘಟನೆ ಬಗ್ಗೆ ರಾಜ್ಯಪಾಲರು ವರದಿಯನ್ನು ಕೇಳಿದ್ದಾರೆ, ಶೀಘ್ರದಲ್ಲೇ ಘಟನೆ ಸಂಬಂಧ ರಾಜ್ಯಪಾಲರಿಗೆ ವರದಿ ಕಳುಹಿಸಲಿದ್ದೇವೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಭದ್ರತೆಗಾಗಿ ಈಗಾಗಲೇ ಹಲವು ಕ್ರಮ ಕೈಗೊಳ್ಳಲಾಗಿದೆ. ಹೊಸ ವರ್ಷ ಆಚರಣೆಗೆ 1500 ಪೊಲೀಸರನ್ನು ನಿಯೋಜಿಸಿದ್ದೆವು, ಬೆಂಗಳೂರಿನ ಆಯಕಟ್ಟಿನ ಪ್ರದೇಶಗಳಲ್ಲಿ 500 ಸಿಸಿ ಕ್ಯಾಮರಾ ಅಳವಡಿಸುತ್ತೇವೆ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.