
ನವದೆಹಲಿ : ನರೇಂದ್ರ ಮೋದಿ ಸರ್ಕಾರದ ವಿರುದ್ಧ ಯುಪಿಎ ಮಿತ್ರಕೂಟಗಳು ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದು, ಇದು 15 ವರ್ಷಗಳ ಬಳಿಕ ನಡೆದ ಮೊದಲ ಅವಿಶ್ವಾಸ ನಿರ್ಣಯ ಇದಾಗಿತ್ತು.
ಸಂಸತ್ತಿನಲ್ಲಿ ಮೋದಿ ಸರ್ಕಾರದ ಮೊದಲ ಅಗ್ನಿ ಪರೀಕ್ಷೆ ಕೂಡ ಆಗಿತ್ತು. ಆದರೆ ಸಂಖ್ಯಾಬಲವನ್ನು ಗಮನಿಸಿದಾಗ ಅವಿಶ್ವಾಸ ನಿರ್ಣಯದ ವಿರುದ್ಧ ಎನ್ಡಿಎ ನೇತೃತ್ವದ ಸರ್ಕಾರ ಗೆದ್ದಿದ್ದರಲ್ಲಿ ಅಚ್ಚರಿಯೇನಿಲ್ಲ. ಇದರಿಂದ ಬಿಜೆಪಿ ಒಂದೇ ಏಟಿನಲ್ಲಿ ಎರಡು ಹಕ್ಕಿ ಹೊಡೆದಂತಾಗಿದೆ.
ಮುಂದಿನ ಲೋಕಸಭಾ ಚುನಾವಣೆಗೆ ಇದೊಂದು ದಿಕ್ಸೂಚಿಯಾಗಿರಲಿದ್ದು, ಯಾರು ತಮ್ಮ ಪರ ಎಂಬುದನ್ನು ಬಿಜೆಪಿ ಸುಲಭವಾಗಿ ನಿರ್ಣಯಿಸಬಹುದು. ಅಲ್ಲದೆ ಇದರಿಂದ ಮಹಾಘಟಬಂಧನದ ಭವಿಷ್ಯ ಕೂಡ ನಿರ್ಧಾರವಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.