ಪ್ರಧಾನಿ ಮೋದಿ ವಿರುದ್ಧ ಅವಿಶ್ವಾಸ ಗೊತ್ತುವಳಿ ನಿರ್ಣಯ

Published : Mar 16, 2018, 10:00 AM ISTUpdated : Apr 11, 2018, 01:07 PM IST
ಪ್ರಧಾನಿ ಮೋದಿ ವಿರುದ್ಧ  ಅವಿಶ್ವಾಸ ಗೊತ್ತುವಳಿ ನಿರ್ಣಯ

ಸಾರಾಂಶ

ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯಾದ ನಾಲ್ಕು ವರ್ಷಗಳ ನಂತರ ಮೊದಲ ಬಾರಿ ಸರ್ಕಾರದ ವಿರುದ್ಧ ಲೋಕಸಭೆಯಲ್ಲಿ ಅವಿಶ್ವಾಸ ಗೊತ್ತುವಳಿ ಮಂಡನೆಯಾಗಲಿದೆ.

ನವದೆಹಲಿ/ಹೈದರಾಬಾದ್: ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯಾದ ನಾಲ್ಕು ವರ್ಷಗಳ ನಂತರ ಮೊದಲ ಬಾರಿ ಸರ್ಕಾರದ ವಿರುದ್ಧ ಲೋಕಸಭೆಯಲ್ಲಿ ಅವಿಶ್ವಾಸ ಗೊತ್ತುವಳಿ ಮಂಡನೆಯಾಗಲಿದೆ.

ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನಕ್ಕಾಗಿ ಆಗ್ರಹಿಸುತ್ತಿರುವ ವೈಎಸ್‌ಆರ್ ಕಾಂಗ್ರೆಸ್ ಪಕ್ಷ ಶುಕ್ರವಾರ ಅವಿಶ್ವಾಸ ಗೊತ್ತುವಳಿ ಮಂಡಿಸುವ ನಿರೀಕ್ಷೆ ಇದ್ದು, ಅದಕ್ಕೆ ಆಂಧ್ರದ ಆಡಳಿತಾರೂಢ ತೆಲುಗುದೇಶಂ ಪಕ್ಷ ಎನ್‌ಡಿಎದಿಂದ ಹೊರಬಂದು ಬೆಂಬಲ ನೀಡಲಿದೆ ಎನ್ನಲಾಗುತ್ತಿದೆ.

ಅವಿಶ್ವಾಸ ನಿಲುವಳಿ ಮಂಡಿಸಲು 54 ಸಂಸದರ ಸಹಿ ಬೇಕು. ವೈಎಸ್‌ಆರ್ ಕಾಂಗ್ರೆಸ್ ಬಳಿ ಆರು ಸಂಸದರು ಮಾತ್ರ ಇದ್ದಾರೆ. ಹೀಗಾಗಿ ಪಕ್ಷದ ಅಧ್ಯಕ್ಷ ಜಗನ್ಮೋಹನ ರೆಡ್ಡಿ ಅವರು ಎಲ್ಲಾ ಪಕ್ಷಗಳೂ ಆಂಧ್ರಪ್ರದೇಶದ ವಿಶೇಷ ಸ್ಥಾನಮಾನದ ಬೇಡಿಕೆಯನ್ನು ಬೆಂಬಲಿಸಿ ಅವಿಶ್ವಾಸ ಗೊತ್ತುವಳಿಗೆ ಸಹಿ ಹಾಕಬೇಕು ಎಂದು ಮನವಿ ಮಾಡಿದ್ದಾರೆ.  ವೈಎಸ್‌ಆರ್ ಸಂಸದ ವೈ.ವಿ.ಸುಬ್ಬಾರೆಡ್ಡಿ ಶುಕ್ರವಾರ ಲೋಕಸಭೆಯಲ್ಲಿ ಅವಿಶ್ವಾಸ ನಿಲುವಳಿ ಮಂಡಿಸಲಿದ್ದಾರೆ.

ಸರ್ಕಾರ ಬೀಳದು: ಲೋಕಸಭೆಯಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತವಿರುವುದರಿಂದ ಅವಿಶ್ವಾಸ ಗೊತ್ತುವಳಿಯ ಮೂಲಕ ಸರ್ಕಾರವನ್ನು ಬೀಳಿಸಲು ಸಾಧ್ಯವಿಲ್ಲ. ಹೀಗಾಗಿ ವೈಎಸ್‌ಆರ್ ಕಾಂಗ್ರೆಸ್‌ನ ಅವಿಶ್ವಾಸ ಗೊತ್ತುವಳಿಗೆ ವಿಶೇಷ ಮಹತ್ವ ಇಲ್ಲವಾದರೂ, ಗೊತ್ತುವಳಿ ಮಂಡನೆಯ ನಂತರ ಅದರಲ್ಲಿನ ವಿಷಯದ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಯಬೇಕಾಗುತ್ತದೆ. ಆದ್ದರಿಂದ ಆಂಧ್ರಪ್ರದೇಶದ ವಿಶೇಷ ಸ್ಥಾನಮಾನ ಬೇಡಿಕೆಯ ಬಗ್ಗೆ ಚರ್ಚೆ ನಡೆಯುತ್ತದೆ. ಇದು ಆಂಧ್ರಪ್ರದೇಶದಲ್ಲಿ ಪ್ರಮುಖ ಪ್ರತಿಪಕ್ಷವಾಗಿರುವ ವೈಎಸ್ ಆರ್ ಪಕ್ಷಕ್ಕೆ ರಾಜಕೀಯ ಮೈಲೇಜ್ ತಂದುಕೊಡುತ್ತದೆ ಎಂದು ವಿಶ್ಲೇಷಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಇದು ರಾಜಕೀಯ ನಾಟಕ ಎಂದು ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಟಿಡಿಪಿ ಟೀಕಿಸಿದೆ.

ಆದರೂ ಬೆಂಬಲಿಸದೇ ಹೋದರೆ ಜನರ ವಿರೋಧ ಕಟ್ಟಿಕೊಳ್ಳಬೇಕಾದೀತು ಎಂಬ ಭಯದಿಂದ ಅವಿಶ್ವಾಸ ನಿಲುವಳಿಯನ್ನು ಟಿಡಿಪಿ ಬೆಂಬಲಿಸಲಿದೆ. ಆದರೆ ಎನ್ ಡಿಎನಿಂದ ಹೊರಬೀಳುವ ಬಗ್ಗೆ ಈಗಲೇ ನಿರ್ಧಾರ ಕೈಗೊಳ್ಳದು ಎಂದು ಹೇಳಲಾಗಿದೆ. ಈ ಹಿಂದೆ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರ ಅವಿಶ್ವಾಸ ನಿಲುವಳಿ ನಂತರ ನಡೆದ ಮತದಾನದಲ್ಲಿ ಒಂದು ಮತದಿಂದ ಸೋಲು ಅನುಭವಿಸಿ ಪತನಗೊಂಡಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆಸು ಧ್ವನಿಯಲ್ಲಿ ಮಾತಾಡಿದ್ದರು ಎನ್ನುವ ಆರೋಪ.. 'ಬಂಗಾರಿ' ಕೇಸ್‌ನಲ್ಲಿ ನಟ ಧರ್ಮಗೆ ಧ್ವನಿ ಪರೀಕ್ಷೆ?
Vande Mataram ಎರಡು ಪದಗಳ ಅರ್ಥ ವಿವರಿಸಿದ ಇಕ್ರಾ ಹಸನ್: ಸಂಸದೆಯ ಮಾತು ವೈರಲ್