ವಿರೋಧದ ನಡುವೆಯೇ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಅಸ್ತು ಎಂದ ಸಿಎಂ

Published : Mar 19, 2018, 02:34 PM ISTUpdated : Apr 11, 2018, 01:00 PM IST
ವಿರೋಧದ ನಡುವೆಯೇ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಅಸ್ತು ಎಂದ ಸಿಎಂ

ಸಾರಾಂಶ

ಪ್ರತ್ಯೇಕ ಲಿಂಗಾಯತ ಧರ್ಮ ವರದಿ ಅಂಗೀಕರಿಸಿದ ಸಿಎಂ

ಬೆಂಗಳೂರು: ಪ್ರತ್ಯೇಕ ಧರ್ಮ ಸ್ಥಾಪನೆಗೆ ವೀರಶೈವ ಪರ ಸಚಿವರ ವಿರೋಧ ವ್ಯಕ್ತವಾದ ನಡುವೆಯೂ, ಸಿಎಂ ಸಿದ್ದರಾಮಯ್ಯ ಐತಿಹಾಸಿಕ ನಿರ್ಣಯ ಕೈಗೊಂಡಿದ್ದಾರೆ. ಸಂಪುಟದಲ್ಲಿ ಬಿಸಿ ಬಿಸಿ ಚರ್ಚೆಯ ನಡುವೆಯೂ  ಸಿಎಂ ಸಿದ್ದರಾಮಯ್ಯ ನ್ಯಾ.ನಾಗಮೋಹನ್ ದಾಸ್ ನೀಡಿರುವ ಶಿಫಾರಸ್ಸುಗಳನ್ನು ಅಂಗೀಕರಿಸಿದ್ದಾರೆ.

ಲಿಂಗಾಯತ/ ವೀರಶೈವ ಹಾಗೂ ಹೊಸ ತತ್ವ ಪಾಲಿಸುವ ಎಲ್ಲರಿಗೂ ಅನ್ವಯವಾಗುವಂತೆ  ಪ್ರತ್ಯೇಕ ಧರ್ಮ ಎಂದು ಶಿಫಾರಸು ಮಾಡಲು ಸಂಪುಟ ನಿರ್ಧರಿಸಿದೆ, ಎನ್ನಲಾಗಿದೆ.

ಮುಖ್ಯಮಂತ್ರಿಗಳ ಅಧಿಕೃತ ಘೋಷಣೆ ಬಳಿಕವಷ್ಟೇ, ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ.

'ವೀರಶೈವ ಲಿಂಗಾಯತ ಎರಡನ್ನೂ ಸೇರಿಸಿ ಪ್ರತ್ಯೇಕ ಧರ್ಮ ರಚಿಸಲಿ. ಸಭೆಯಲ್ಲಿ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಈ ಬಗ್ಗೆ ಮತ್ತೆ ಚರ್ಚೆ ಮಾಡೋಣ ಎಂದು ಸಿಎಂ ಹೇಳಿದ್ದಾರೆ . ಕಾನೂನು ತಜ್ಞರ ಅಭಿಪ್ರಾಯ ಪಡೆದು ಸಿಎಂ ನಿರ್ಧರಿಸುತ್ತಾರೆ. ಸಭೆಯಲ್ಲಿ ಯಾವುದೇ ರೀತಿಯ ಗದ್ದಲ ಆಗಿಲ್ಲ,' ಎಂದು ವಿಧಾಸೌಧದಲ್ಲಿ ಎಸ್ ಎಸ್ ಮಲ್ಲಿಕಾರ್ಜುನ ಹೇಳಿಕೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಿತ್ತೂರು ಕರ್ನಾಟಕ ಹೆಸರಲ್ಲಿ ಪ್ರತ್ಯೇಕ ರಾಜ್ಯವಾಗಲಿ: ಶಾಸಕ ರಾಜು ಕಾಗೆ ಆಗ್ರಹ
ಸಿಎಂ ಸಿದ್ದರಾಮಯ್ಯ ಹೇಳಿಕೆಯೇ ನಮಗೆ ಅಂತಿಮ ಮಾರ್ಗದರ್ಶನ: ಸಚಿವ ದಿನೇಶ್ ಗುಂಡೂರಾವ್