ಅತೃಪ್ತರಿಗೂ ನಮಗೂ ಸಂಬಂಧ ಇಲ್ಲ : ಉಲ್ಟಾ ಹೊಡೆದ ಬಿಜೆಪಿ ನಾಯಕ

Published : Jul 29, 2019, 11:42 AM ISTUpdated : Jul 29, 2019, 11:45 AM IST
ಅತೃಪ್ತರಿಗೂ ನಮಗೂ ಸಂಬಂಧ ಇಲ್ಲ : ಉಲ್ಟಾ ಹೊಡೆದ ಬಿಜೆಪಿ ನಾಯಕ

ಸಾರಾಂಶ

ಅವರಿಗೂ ನಮಗೂ ಯಾವುದೇ ರೀತಿಯ ಸಂಬಂಧ ಇಲ್ಲ ಎಂದು ಇಷ್ಟು ದಿನಗಳ ಕಾಲ ಬೆನ್ನಿಗೆ ನಿಂತವರಂತೆ ಇದ್ದ ನಾಯಕರು ಈಗ ಕೈ ಎತ್ತಿದಂತಿದೆ. ಸಪೋರ್ಟ್ ನೀಡುವಂತೆ ಮಾತಾಡುತ್ತಿದ್ದವರು ಈಗ ಉಲ್ಟಾ ಹೊಡೆದಿದ್ದಾರೆ. 

ಬೆಂಗಳೂರು [ಜು.29]: ರಾಜ್ಯದಲ್ಲಿ ರೆಬೆಲ್ ಆಗಿ ಹೋದ 17 ಶಾಸಕರು ಅನರ್ಹರಾಗಿದ್ದಾರೆ. ಇತ್ತ ಬಿಜೆಪಿ ವಿಶ್ವಾಸ ಮತ ಯಾಚನೆಗೆ  ಸಜ್ಜಾಗಿದೆ. 

ಆದರೆ ಇಷ್ಟು ದಿನಗಳ ಕಾಲ ರೆಬೆಲ್ ಶಾಸಕರ ಬೆನ್ನಿಗೆ ನಿಂತಂತೆ ಮಾತನಾಡುತ್ತಿದ್ದ ಬಿಜೆಪಿ ನಾಯಕರು ಈಗ ಕೈ ಎತ್ತಿದಂತಿದೆ.  ಅವರು ಯಾರು ಎಂದೇ ಗೊತ್ತಿಲ್ಲ. ಅವರು ಏನು ಮಾಡುತ್ತಿದ್ದಾರೋ ಎನ್ನುವುದೂ ತಿಳಿದಿಲ್ಲ ಎಂದು ಬಿಜೆಪಿ ನಾಯಕ ಆರ್. ಅಶೋಕ್ ಹೇಳಿದ್ದಾರೆ. 

ಚುನಾವಣೆ ಆಹ್ವಾನ ತಿರಸ್ಕರಿಸಿದ ಕೈ ನಾಯಕ ಚೆಲುವರಾಯಸ್ವಾಮಿ

ಅವರನ್ನು ಅನರ್ಹ ಮಾಡಿರುವುದು ಅವರ ಪಕ್ಷಕ್ಕೆ ಬಿಟ್ಟ ವಿಚಾರ. ಅದಕ್ಕೂ ನಮಗೂ ಯಾವುದೇ ರೀತಿಯ ಸಂಬಂಧ ಇಲ್ಲ. ಅವರು ನಮ್ಮ ಪಕ್ಷಕ್ಕೆ ಬರುವುದಾದರೆ ಮುಂದೆ ನೋಡೋಣ ಎಂದು ಪದ್ಮನಾಭನಗರ ಶಾಸಕ ಅಶೋಕ್ ಹೇಳಿದರು. 

17 ರೆಬೆಲ್ ಶಾಸಕರನ್ನು ಅನರ್ಹ ಮಾಡುತ್ತಿದ್ದಂತೆ ಸ್ಪೀಕರ್ ನಿರ್ಧಾರದ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದ ಬಿಜೆಪಿ ನಾಯಕರು ಇದೀಗ ಉಲ್ಟಾ ಹೊಡೆದಿದ್ದಾರೆ. ಅವರಿಗೂ ನಮಗೂ ಸಂಬಂಧವೇ ಇಲ್ಲ ಎನ್ನುತ್ತಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪರಿಷತ್‌ನಲ್ಲಿ ಮಧುಗೆ ಮೆಚ್ಚುಗೆ: 'ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ?' ಕಾಲೆಳೆದ ಸಿಟಿ ರವಿ!
ಸುದ್ದಿ ಓದದಿದ್ದರೆ ಡಿಜಿಟಲ್‌ ಅರೆಸ್ಟ್‌ ಆಗ್ತಿರಿ!