
ಇಸ್ಲಾಮಾಬಾದ್(ಅ.15): ಭಾರತವು 2018ರ ಡಿಸೆಂಬರ್ ವೇಳೆಗೆ ಪಾಕಿಸ್ತಾನದೊಂದಿಗೆ ತನ್ನ ಗಡಿಯನ್ನು ಸಂಪೂರ್ಣ ಬಂದ್ ಮಾಡಲಿದೆ ಎಂಬ ಕುರಿತಂತೆ ಯಾವುದೇ ಅಧಿಕೃತ ಮಾಹಿತಿಯಿಲ್ಲ ಎಂದು ಪಾಕ್ ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಗೃಹಸಚಿವ ರಾಜ್'ನಾಥ್ ಸಿಂಗ್ ಅವರು ಕೆಲದಿನಗಳ ಹಿಂದಷ್ಟೇ 2018ರ ಡಿಸೆಂಬರ್ ಅಂತ್ಯದ ವೇಳೆಗೆ ಭಾರತ ಹಾಗೂ ಪಾಕ್ ಗಡಿಯನ್ನು ಸಂಪೂರ್ಣ ಬಂದ್ ಮಾಡುತ್ತೇವೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪಾಕಿಸ್ತಾನ ವಿದೇಶಾಂಗ ಸಚಿವಾಲಯದ ವಕ್ತಾರೆ ನಫೀಸ್ ಝಾಕರಿಯಾ, 'ನಮಗೆ ಈ ಕುರಿತಂತೆ ಯಾವುದೇ ಮಾಹಿತಿಯಿಲ್ಲ' ಎಂದಿದ್ದಾರೆ.
ಭಾರತ ಸರ್ಕಾರವು ನೆರೆಹೊರೆಯ ದೇಶಗಳೊಂದಿಗೆ ಶಾಂತಿಯುತ ಸಂಬಂಧ ಹೊಂದಬೇಕು ಎಂದು ಹೇಳುತ್ತದೆ. ಆದರೆ ಅದರ ಚಟುವಟಿಕೆಗಳು ಗೊಂದಲವನ್ನು ಹುಟ್ಟಿಸುವಂತಿದೆ ಎಂದು ಡಾನ್ ಪತ್ರಿಕೆಗೆ ಝಾಕರಿಯಾ ತಿಳಿಸಿದ್ದಾರೆಂದು ವರದಿಯಾಗಿದೆ.
ಸೆಪ್ಟೆಂಬರ್ 18 ರಂದು ಭಾರತದ ಉರಿ ಸೇನಾ ನೆಲೆ ಮೇಲೆ ಪಾಕ್ ಮೂಲದ ಉಗ್ರರು ದಾಳಿ ನಡೆಸಿ 19 ಯೋಧರನ್ನು ಹತ್ಯೆಮಾಡಿದ್ದರು. ಹೀಗಾಗಿ ಉಭಯ ದೇಶಗಳ ನಡುವೆ ಬಿಕ್ಕಟ್ಟು ಉಂಟಾಗಿತ್ತು. ಉಗ್ರರ ದಾಳಿಯನ್ನು ತಡೆಯಲು ಭಾರತ ಹಾಗೂ ಪಾಕ್ ಗಡಿಯನ್ನು ಸಂಪೂರ್ಣ ಮುಚ್ಚುವುದಾಗಿ ರಾಜ್'ನಾಥ್ ಸಿಂಗ್ ಹೇಳಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.