
ಲಕ್ನೋ (ಜ.17): ನಿನ್ನೆಯಷ್ಟೇ ಅಪ್ಪನಿಂದ ‘ಸೈಕಲ್’ನ್ನು ಕಿತ್ತುಕೊಳ್ಳಲು ಯಶಸ್ವಿಯಾದ ಅಖಿಲೇಶ್, ತಂದೆ ಮುಲಾಯಂ ಸಿಂಗ್ ಯಾದವ್’ರೊಂದಿಗೆ ಯಾವುದೇ ಭಿನಾಭಿಪ್ರಾಯವಿಲ್ಲವೆಂದೂ, ಮುಂದಿನ ಚುನಾವಣೆಯನ್ನು ಒಗಟ್ಟಾಗಿ ಎದುರಿಸುವುದಾಗಿ ಹೇಳಿದ್ದಾರೆ.
ತಂದೆಯೊಂದಿಗೆ ಯಾವುದೇ ಭಿನಾಭಿಪ್ರಾಯವಿಲ್ಲ, ಅವರೊಂದಿಗೆ ಸಂಬಂಧ ಕಡಿದುಕೊಳ್ಳಲು ಸಾಧ್ಯವಿಲ್ಲವೆಂದು ಹೇಳಿರುವ ಅಖಿಲೇಶ್, ಮುಂದಿನ ಬಾರಿಯೂ ಉತ್ತರ ಪ್ರದೇಶದಲ್ಲಿ ಸರ್ಕಾರ ರಚಿಸುವುದು ತಮ್ಮ ಗುರಿಯಾಗಿದೆ ಎಂದು ಹೇಳಿದ್ದಾರೆ.
ತಾನು ಹಾಗೂ ಮುಲಾಯಂ ಸಿಂಗ್ ಪ್ರತ್ಯೇಕವಾಗಿ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಶೇ.90 ಅಭ್ಯರ್ಥಿಗಳು ಎರಡರಲ್ಲೂ ಇದ್ದಾರೆ ಎಂದು ಅಖಿಲೇಶ್ ಹೇಳಿದ್ದಾರೆ.
ಸಮಾಜವಾದಿ ಪಕ್ಷದ ಚಿಹ್ನೆ ‘ಸೈಕಲ್’ನ್ನು ಅಖಿಲೇಶ್ ನೇತೃತ್ವದ ಬಣಕ್ಕೆ ನಿನ್ನೆ ಚುನಾವಣಾ ಆಯೋಗವು ನೀಡಿದೆ. ಮುಂದಿನ ಚುನಾವಣೆಯಲ್ಲಿ ಸಮಾಜವಾದಿ ಪಕ್ಷವು ಕಾಂಗ್ರೆಸ್’ನೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ತಿಳಿದುಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.