
ನವದೆಹಲಿ: ಕಳೆದ ಜು. 1ರಿಂದ ದೇಶಾದ್ಯಂತ ಜಾರಿಗೆ ಬಂದಿರುವ ಜಿಎಸ್ಟಿ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸುಳ್ಳು ವದಂತಿಗಳು ಹಬ್ಬುತ್ತಿದ್ದು, ಅವುಗಳಿಗೆ ಸಾರ್ವಜನಿಕರು ಕಿವಿಕೊಡಬಾರದೆಂದು ಕೇಂದ್ರ ಸರ್ಕಾರ ಮನವಿ ಮಾಡಿದೆ.
ಜಿಎಸ್ಟಿಯಲ್ಲಿ ಹಿಂದೂ ದೇವಸ್ಥಾನ ಟ್ರಸ್ಟ್’ಗಳು ಜಿಎಸ್ಟಿ ಪಾವತಿಸಬೇಕು, ಆದರೆ ಮಸೀದಿ ಹಾಗೂ ಚರ್ಚುಗಳಿಗೆ ಅದರಿಂದ ವಿನಮಾಯಿತಿ ನೀಡಲಾಗಿದೆ ಎಂದು ಸೊಶಿಯಲ್ ಮೀಡಿಯಾದಲ್ಲಿ ಸುಳ್ಳು ಮಾಹಿತಿಗಳನ್ನು ಹರಡಲಾಗುತ್ತಿದ್ದು, ಅದು ಸಂಪೂರ್ಣವಾಗಿ ಸುಳ್ಳು ಮಾಹಿತಿಯಾಗಿದೆ ಎಂದು ಸರ್ಕಾರ ಸ್ಪಷ್ಟೀಕರಣ ನೀಡಿದೆ.
ಜಿಎಸ್ಟಿ ಕಾನೂನಿನಲ್ಲಿ ಯಾವುದೇ ಧರ್ಮಾಧಾರಿತ ಅಂಶಗಳಿಲ್ಲ. ಅಂತಹ ಸಂದೇಶಗಳನ್ನು ಜನರು ಕಿವಿಗೊಒಡಬಾರದು ಹಾಗೂ ಹರಡಬಾರದು ಎಂದು ಮನವಿ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.