ಬಿಜೆಪಿಯಿಂದ ಮಠವನ್ನು ವಶಕ್ಕೆ ಪಡೆಯುವ ವದಂತಿ

Published : Nov 02, 2017, 05:03 PM ISTUpdated : Apr 11, 2018, 12:38 PM IST
ಬಿಜೆಪಿಯಿಂದ ಮಠವನ್ನು ವಶಕ್ಕೆ ಪಡೆಯುವ ವದಂತಿ

ಸಾರಾಂಶ

ರಾಜ್ಯದ ದೇಗುಲಗಳಲ್ಲಿ ಡ್ರೆಸ್‌ಕೋಡ್ ಇಲ್ಲ: ಸಚಿವ

ಹಾವೇರಿ: ಮುಜರಾಯಿ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಲು ಸುತ್ತೋಲೆ ಹೊರಡಿಸಲಾಗಿದೆ. ಆದರೆ, ಇಂಥದ್ದೇ ವಸ್ತ್ರ ಧರಿಸಿ ದೇವಸ್ಥಾನಕ್ಕೆ ಬರುವಂತೆ ಕಡ್ಡಾಯಗೊಳಿಸುತ್ತಿಲ್ಲ ಎಂದು ಮುಜರಾಯಿ ಖಾತೆ ಸಚಿವ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇವಸ್ಥಾನಗಳಲ್ಲಿ ಕಡ್ಡಾಯ ವಾಗಿ ಡ್ರೆಸ್ ಕೋಡ್ ಜಾರಿಗೊಳಿಸುವಷ್ಟು ಶ್ರೀಮಂತ ದೇಶ ನಮ್ಮದಲ್ಲ. ಸವದತ್ತಿ ಯಲ್ಲಮ್ಮ ದೇವಸ್ಥಾನ ಸೇರಿ ಅನೇಕ ಕಡೆ ಬಡ ಭಕ್ತರೇ ಹೆಚ್ಚಾಗಿ ಬರುತ್ತಾರೆ. ದೇಶದ ಬೇರೆ ಬೇರೆ ರಾಜ್ಯಗಳಿಂದಲೂ ಭಕ್ತರು ಬರುತ್ತಾರೆ. ಅವರಿಗೆಲ್ಲ ಕಡ್ಡಾಯವಾಗಿ ಡ್ರೆಸ್‌ಕೋಡ್ ಜಾರಿಗೊಳಿಸಿದರೆ ತೊಂದರೆಯಾಗುತ್ತದೆ.

ಹಾಗಾಗಿ, ಹಿಂದೂ ಸಂಸ್ಕೃತಿ ಹಾಗೂ ಧಾರ್ಮಿಕ ಭಾವನೆಗೆ ಧಕ್ಕೆ ಬಾರದ ರೀತಿಯಲ್ಲಿ ಸಭ್ಯ ರೀತಿಯ ವಸ್ತ್ರವನ್ನು ಧರಿಸಬೇಕು ಎಂಬ ಸುತ್ತೋಲೆಯನ್ನು ಈಗಾಗಲೇ ಹೊರಡಿಸಲಾಗಿದೆ ಎಂದರು.

ಯಾವ ಮಠವನ್ನೂ ವಶಕ್ಕೆ ಪಡೆಯಲ್ಲ, ಬಿಜೆಪಿಯಿಂದ ಇಂಥ ವದಂತಿ:

ಮಠ, ದೇವಸ್ಥಾನಗಳನ್ನು ಸರ್ಕಾರ ಸ್ವಾಧೀನ ಮಾಡಿಕೊಳ್ಳುತ್ತಿದೆ ಎಂಬ ಸೋಂದಾ ಸ್ವರ್ಣವಲ್ಲಿ ಶ್ರೀಗಳ ಆರೋಪ ಸತ್ಯಕ್ಕೆ ದೂರವಾಗಿದ್ದು, ಯಾವ ಮಠಗಳನ್ನೂ ಸರ್ಕಾರ ವಶಕ್ಕೆ ತೆಗೆದುಕೊಳ್ಳು ವುದಿಲ್ಲ ಎಂದು  ಮುಜರಾಯಿ ಇಲಾಖೆ ಸಚಿವ ರುದ್ರಪ್ಪ ಲಮಾಣಿ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಸೋಂದಾ ಶ್ರೀಗಳಿಗೆ ಯಾರಾದರೂ ಮಠವನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳುತ್ತಿದೆ ಎಂದು ಹೆದರಿಸಿದ್ದರೆ ಶ್ರೀಗಳು ಕೂಡಲೇ ನನ್ನನ್ನು ಸಂಪರ್ಕಿಸಲಿ. ಅವರ ಸಮಸ್ಯೆ ಸರಿಪಡಿಸುತ್ತೇನೆ. ಈ ಕುರಿತು ಶ್ರೀಗಳೊಂದಿಗೆ ಮಾತನಾ ಡುತ್ತೇನೆ ಎಂದು ಹೇಳಿದರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

5 ರಾಜ್ಯದ ಮತಪಟ್ಟಿ ಪ್ರಕಟ : 1 ಕೋಟಿ ಹೆಸರು ಡಿಲೀಟ್
ಯಹೂದಿ ನರಮೇಧ ನಡೆಸಿದ ತಂದೆ-ಮಗನಿಗೆ ಐಸಿಸ್‌ ಲಿಂಕ್‌ ದೃಢ