
ಬೆಂಗಳೂರು : ಬೆಂಗಳೂರು-ಮೈಸೂರು ಮಾರ್ಗದ ಜೋಡಿ ಹಳಿ ನಿರ್ಮಾಣ ಹಾಗೂ ವಿದ್ಯುದೀಕರಣ ಕಾಮಗಾರಿ ಪೂರ್ಣಗೊಂಡು ತಿಂಗಳು ಕಳೆದರೂ ಈ ಮಾರ್ಗದಲ್ಲಿ ವಿದ್ಯುತ್ ಚಾಲಿತ (ಎಲೆಕ್ಟ್ರಿಕ್ ಲೋಕೋ) ರೈಲು ಸಂಚಾರಕ್ಕೆ ಇನ್ನೂ ಚಾಲನೆ ಭಾಗ್ಯ ಸಿಕ್ಕಿಲ್ಲ.
ರೈಲ್ವೆ ಸುರಕ್ಷತಾ ಆಯುಕ್ತ (ಸಿಆರ್ಎಸ್) ಕೆ.ಎಸ್. ಮನೋಹರನ್ ನೇತೃತ್ವದ ತಂಡ ಕಳೆದ ಡಿಸೆಂಬರ್ 5ರಂದು ಎಲಿಯೂರಿನಿಂದ ಮೈಸೂರುವರೆಗಿನ ಮಾರ್ಗದ ವಿದ್ಯುದ್ದೀಕರಣ ಕಾಮಗಾರಿ ಪರಿಶೀಲನೆ ನಡೆಸಿ ವಿದ್ಯುತ್ ಚಾಲಿತ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿತ್ತು. ಆದರೆ, ತಿಂಗಳು ಉರುಳಿದರೂ ವಿದ್ಯುತ್ ಚಾಲಿತ ರೈಲು ಸಂಚಾರ ಉದ್ಘಾಟನೆ ಸಾಧ್ಯವಾಗಿಲ್ಲ.
ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ (ಕೆಎಸ್ಆರ್) ಮೈಸೂರಿಗೆ 22 ಬೋಗಿಯ ಒಂದು ರೈಲು ಸಂಚರಿಸಲು 650 ಲೀಟರ್ ಹೈಸ್ಪೀಡ್ ಡೀಸೆಲ್ ಬೇಕಾಗುತ್ತದೆ. ಇದರ ಪ್ರಕಾರ ರೈಲು ಮೈಸೂರಿಗೆ ಹೋಗಿ ಬರಲು 1,300 ಲೀಟರ್ ಡೀಸೆಲ್ ವ್ಯಯವಾಗುತ್ತಿದೆ.
ವಿದ್ಯುತ್ ಚಾಲಿತ ರೈಲು ಸಂಚಾರಕ್ಕೆ ಸಿಆರ್ಎಸ್ ಒಪ್ಪಿಗೆ ಸೂಚಿಸಿದ ಬಳಿಕ ನೈಋತ್ಯ ರೈಲ್ವೆ ಡಿಸೆಂಬರ್ ಅಂತ್ಯದಲ್ಲೇ ಮೈಸೂರು-ಚೆನ್ನೈ ನಡುವೆ ಸಂಚರಿಸುವ ಶತಾಬ್ದಿ ರೈಲಿಗೆ ಎಲೆಕ್ಟ್ರಿಕ್ ಲೋಕೋ ಅಳವಡಿಸಲು ನಿರ್ಧರಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.