
ಬೆಂಗಳೂರು(ಅ.24): ದುನಿಯಾ ವಿಜಿ ವಿರುದ್ಧ ಮಗಳಿಂದಲೇ ದೂರು ಪ್ರಕರಣದಲ್ಲಿ ಗಿರಿನಗರ ಪೊಲೀಸರು ಎಲ್ಲಾ ಸಾಧ್ಯತೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ದಕ್ಷಿಣ ವಲಯ ಡಿಸಿಪಿ ಅಣ್ಣಾಮಲೈ ಹೇಳಿದ್ದಾರೆ.
ತನಿಖೆ ಸೂಕ್ತ ದಾರಿಯಲ್ಲಿ ಸಾಗುತ್ತಿದ್ದು, ಪ್ರಾಥಮಿಕ ತನಿಖೆಯಲ್ಲಿ ವಿಜಿ ಹಲ್ಲೆ ಮಾಡಿರುವುದು ಕಂಡು ಬಂದಿಲ್ಲಎಂದು ಅಣ್ಣಾಮಲೈ ತಿಳಿಸಿದ್ದಾರೆ.
ಮನೆಯ ಸಿಸಿಟಿವಿ ಫೂಟೇಜ್ ಪರಿಶೀಲಿಸಿದ್ದು, ಹಲ್ಲೆ ಬಗ್ಗೆ ಯಾವುದೇ ಪುರಾವೆ ದೊರೆತಿಲ್ಲ ಎಂದು ಅಣ್ಣಾಮಲೈ ಮಾಹಿತಿ ನೀಡಿದರು. ಅಲ್ಲದೇ ಹಲ್ಲೆ ಪ್ರಕರಣ ಕುರಿತೇ ತನಿಖೆ ನಡೆಯುತ್ತಿರುವುದರಿಂದ ಯಾವುದೇ ಪುರಾವೆ ಸಿಗದ ಕಾರಣಕ್ಕೆ ಪ್ರಕರಣ ಬಹುತೇಕ ಮುಗಿದ ಹಾಗೆ ಭಾಸವಾಗುತ್ತಿದೆ ಎಂದು ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ದುನಿಯಾ ವಿಜಿಗೆ ಮತ್ತೊಂದು ಸಂಕಷ್ಟ: ಪುತ್ರಿಯಿಂದಲೇ ದೂರು ದಾಖಲು
ಮಗಳ ಮೇಲೆ ದುನಿಯಾ ವಿಜಿ ಹಲ್ಲೆ: ಫುಲ್ ಸ್ಟೋರಿ ಬಿಚ್ಚಿಟ್ಟ ಪತ್ನಿ ನಾಗರತ್ನಾ!
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೊನಿಕಾ ಹೇಗಿದ್ದಾಳೆ?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.