
ಬೆಂಗಳೂರು : ಬೆಳಗಾವಿ ರಾಜಕಾರಣದ ಬೆಳವಣಿಗೆಗಳನ್ನು ಬಳಸಿಕೊಳ್ಳಲು ಬಿಜೆಪಿ ತೆರೆಮರೆಯ ಕಸರತ್ತು ನಡೆಸುತ್ತಿರುವುದು ಜೆಡಿಎಸ್ ಪಾಳೆಯದಲ್ಲಿ ಗೊಂದಲಕ್ಕೆ ಕಾರಣವಾದರೂ ಪಕ್ಷ ಮತ್ತು ಸರ್ಕಾರ ಯಾವುದೇ ರೀತಿ ಯಲ್ಲಿಯೂ ಇಕ್ಕಟ್ಟಿಗೆ ಸಿಲುಕುವುದಿಲ್ಲ ಎಂಬ ಆತ್ಮವಿಶ್ವಾಸದಲ್ಲಿ ಮುಂದುವರೆದಿದೆ.
ಸಮ್ಮಿಶ್ರ ಸರ್ಕಾರದ ಪರಿಸ್ಥಿತಿ ಯು ಡೋಲಾಯಮಾನ ವಾಗಿದೆ ಎಂದು ಪ್ರತಿಪಕ್ಷ ಬಿಜೆಪಿ ಟೀಕಿಸುತ್ತಿರುವುದರ ಜತೆಗೆ ರಾಜಕೀಯ ದಾಳಗಳನ್ನು ಉರುಳಿಸಲಾರಂಭಿಸಿದೆ. ಕಾಂಗ್ರೆಸ್ಸಿನ ಜಾರಕಿಹೊಳಿ ಸಹೋದರರು ತಮ್ಮ ಪಕ್ಷದ ವಿರುದ್ಧವೇ ತಿರುಗಿಬಿದ್ದಿರುವುದು ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿದೆ. ಇದನ್ನೇ ತಮ್ಮ ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಳ್ಳಲು ಬಿಜೆಪಿ ಇನ್ನಿಲ್ಲದ ತಂತ್ರಗಾರಿಕೆ ಯಲ್ಲಿ ತೊಡಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನಿವಾಸದಲ್ಲಿ ಗೌಪ್ಯ ಚರ್ಚೆಗಳು ನಡೆಯುತ್ತಿರುವುದು ರಾಜಕಾರಣದಲ್ಲಿ ಆಪರೇಷನ್ ಕಮಲ ಭೀತಿ ಶುರುವಾಗಿದೆ. ಸದನದ ವಿಶ್ವಾಸ ಮತಯಾಚನೆಯಲ್ಲಿ ಬಹುಮತ ಪಡೆದು ಸರ್ಕಾರ ರಚನೆ ಮಾಡಿರುವ ಕಾರಣ ಆರು ತಿಂಗಳ ಕಾಲ ಸರ್ಕಾರಕ್ಕೆ ಯಾವುದೇ ಅಪಾಯ ಇಲ್ಲ ಎಂಬುದು ಜೆಡಿಎಸ್ ಮುಖಂಡರ ಅನಿಸಿಕೆ.
ಕಾಂಗ್ರೆಸ್ನಲ್ಲಿನ ಕಿತ್ತಾಟವು ಸರ್ಕಾರದ ಮೇಲಾಗಲಿ ಅಥವಾ ಪಕ್ಷದ ಮೇಲಾಗಲಿ ಯಾವುದೇ ಪರಿಣಾಮ ಬೀರುವುದಿಲ್ಲ. ಒಂದು ವೇಳೆ ಅಂತಹ ಪರಿಸ್ಥಿತಿ ಎದುರಾದರೂ ಜೆಡಿಎಸ್ನ ಶಾಸಕರು ಪಕ್ಷ ಬಿಟ್ಟು ಹೋಗುವುದಿಲ್ಲ. ಏನಿದ್ದರೂ ಕಾಂಗ್ರೆಸ್ ಶಾಸಕರೇ ಹೋಗಬೇಕು ಎಂಬುದು ದೃಢ ನಂಬಿಕೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.