ರೋಹಿಂಗ್ಯಾ ಮುಸಲ್ಮಾನರನ್ನು ದೇಶಕ್ಕೆ ಸೇರಿಸಿಕೊಳ್ಳಲು ಮಯನ್ಮಾರ್ ಸಿದ್ದ: ಸಾನ್ ಸು ಕಿ

Published : Sep 19, 2017, 04:34 PM ISTUpdated : Apr 11, 2018, 12:56 PM IST
ರೋಹಿಂಗ್ಯಾ ಮುಸಲ್ಮಾನರನ್ನು ದೇಶಕ್ಕೆ ಸೇರಿಸಿಕೊಳ್ಳಲು ಮಯನ್ಮಾರ್ ಸಿದ್ದ: ಸಾನ್ ಸು ಕಿ

ಸಾರಾಂಶ

ಜಗತ್ತಿನಾದ್ಯಂತ ಭಾರೀ ಸುದ್ದಿಯಾಗಿದ್ದ ರೋಹಿಂಗ್ಯಾ ಮುಸಲ್ಮಾನರ ವಲಸೆ ವಿಚಾರಕ್ಕೆ ಸಂಬಂಧಿಸಿದಂತೆ ಕಡೆಗೂ ಮಯನ್ಮಾರ್ ಕೌನ್ಸಲರ್ ಔಂಗ್ ಸಾನ್ ಸು ಕಿ ಮೌನ ಮುರಿದಿದ್ದಾರೆ.

ನವದೆಹಲಿ (ಸೆ.19): ಜಗತ್ತಿನಾದ್ಯಂತ ಭಾರೀ ಸುದ್ದಿಯಾಗಿದ್ದ ರೋಹಿಂಗ್ಯಾ ಮುಸಲ್ಮಾನರ ವಲಸೆ ವಿಚಾರಕ್ಕೆ ಸಂಬಂಧಿಸಿದಂತೆ ಕಡೆಗೂ ಮಯನ್ಮಾರ್ ಕೌನ್ಸಲರ್ ಔಂಗ್ ಸಾನ್ ಸು ಕಿ ಮೌನ ಮುರಿದಿದ್ದಾರೆ.

ಜಗತ್ತಿನ ಬೇರೆ ಬೇರೆ ಕಡೆ ವಲಸೆ ಹೋಗಿರುವ ರೋಹಿಂಗ್ಯಾ ಮುಸಲ್ಮಾನರನ್ನು ಪರಿಶೀಲನಾ ಪ್ರಕ್ರಿಯೆ ಮೂಲಕ ದೇಶಕ್ಕೆ ಸೇರಿಸಿಕೊಳ್ಳುವುದಾಗಿ ಮಯನ್ಮಾರ್ ಹೇಳಿದೆ. ಭಾರತ ಕೂಡಾ ಇದಕ್ಕೆ ಒಪ್ಪಬೇಕಿದೆ ಎಂದಿದೆ.  ಎಲ್ಲಿಯೂ ಸಲ್ಲದೇ ಅತಂತ್ರ ಸ್ಥಿತಿಯನ್ನು ಅನುಭವಿಸುತ್ತಿರುವ ರೋಹಿಂಗ್ಯಾ ಮುಸಲ್ಮಾನರನ್ನು ವಾಪಸ್ ದೇಶಕ್ಕೆ ಕರೆಸಿಕೊಳ್ಳಲಿದೆ. ಪರಿಶೀಲನಾ ಪ್ರಕ್ರಿಯೆ ಸದ್ಯದಲ್ಲೇ ಶುರುವಾಗಲಿದೆ.

ಧಾರ್ಮಿಕ ನಂಬಿಕೆಗಳು ಅಥವಾ ಜನಾಂಗೀಯ ಆಧಾರದ ಮೇಲೆ ಮಯನ್ಮಾರ್ ಒಡೆದು ಹೋಗುವುದನ್ನು ನಾವು ಬಯಸುವುದಿಲ್ಲ. ದ್ವೇಷ ಮತ್ತು ಭಯವೇ ಜಾಗತಿಕ ಸಮಸ್ಯೆಗೆ ಕಾರಣ ಎಂದು ನೋಬೆಲ್ ಪಾರಿತೋಷಕ ವಿಜೇತೆ ಔಂಗ್ ಸಾನ್ ಸು ಕಿ ಹೇಳಿದ್ದಾರೆ.

ಹಿಂಸಾಚಾರದಿಂದ ತೊಂದರೆ ಅನುಭವಿಸುತ್ತಿರುವ ರೋಹಿಂಗ್ಯಾಗಳ ಬಗ್ಗೆ ವಿಷಾದ ವ್ಯಕ್ತಪಡಿಸುತ್ತಾ, ಪರಿಶೀಲನಾ ಪ್ರಕ್ರಿಯೆಯಿಂದ ಅವರನ್ನು ಪುನಃ ದೇಶಕ್ಕೆ ಕರೆಸಿಕೊಳ್ಳಲು ಮಯನ್ಮಾರ್ ಸದಾ ಸಿದ್ಧವಿದೆ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೇವಲ 2 ನಿಮಿಷ ಮಗಳ ನೋಡಲು 11ಗಂಟೆಗೆ ಸ್ಟೇಶನ್‌ಗೆ ಬಂದ ತಂದೆ, ಭಾವುಕ ಕ್ಷಣದ ವಿಡಿಯೋ
ಬೀದಿಯಲ್ಲಿ ಬಿದ್ದಿದ್ದ ಕಲ್ಲಿಂದ ಹಣ ಮಾಡೋದು ಹೇಗೆ ಎಂದು ತೋರಿಸಿಕೊಟ್ಟ ಹುಡುಗ: ವೀಡಿಯೋ ಭಾರಿ ವೈರಲ್