
ಲಕ್ನೋ (ಫೆ.06): ಚುನಾವಣಾ ದಿನ ಸಮೀಸುತ್ತಿದ್ದಂತೆ ತಮ್ಮ ಕುಟುಂಬ ಹಾಗೂ ಪಕ್ಷದಲ್ಲಿ ಉದ್ಭವಿಸಿರುವ ಬಿಕ್ಕಟ್ಟಿಗೆ ಸಂಬಂಧಿಸಿ ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಮೌನ ಮುರಿದಿದ್ದಾರೆ.
ನಮ್ಮ ಕುಟುಂಬದಲ್ಲಿ ಅಥವಾ ಪಕ್ಷದಲ್ಲಿ ಯಾವುದೇ ಕಲಹಗಳಿಲ್ಲ; ನಾನು ನಾಳೆಯಿಂದ ಚುನಾವಣಾ ಪ್ರಚಾರದಲ್ಲಿ ತೊಡಗುತ್ತಿದ್ದೇನೆ, ರಾಜ್ಯದ ಮುಂದಿನ ಮುಖ್ಯಮಂತ್ರಿ ಅಖಿಲೇಶ್ ಅವರೇ ಆಗುತ್ತಾರೆ ಎಂದು ಮುಲಾಯಂ ಹೇಳಿದ್ದಾರೆ.
ಪಕ್ಷದ ಬಗ್ಗೆ ಅಮರ್ ಸಿಂಗ್ ಅವರಿಗೂ ಯಾವುದೇ ಮುನಿಸಿಲ್ಲ, ಅಖಿಲೇಶ್’ಗೆ ಕೆಲಸ ಮಾಡುವ ಸಂಪೂರ್ಣ ಸ್ವಾತಂತ್ರ್ಯವಿದೆ ಎಂದು ಹೇಳಿರುವ ಮುಲಾಯಂ, ಸಮಾಜವಾದಿ-ಕಾಂಗ್ರೆಸ್ ಮೈತ್ರಿಕೂಟ ಪರವಾಗಿ ಪ್ರಚಾರ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಫೆ.11ರಂದು ಉತ್ತರ ಪ್ರದೇಶ ವಿಧಾನಸಭೆಗೆ ಮೊದಲ ಹಂತದ ಮತದಾನಗಳು ನಡೆಯಲಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.