ಮತ್ತೆ ಶುರುವಾಯ್ತಾ ಡಿ.ಕೆ. ಶಿವಕುಮಾರ್ - ರೇವಣ್ಣ ಮುನಿಸು..?

Published : Jun 18, 2018, 10:20 AM ISTUpdated : Jun 18, 2018, 10:21 AM IST
ಮತ್ತೆ ಶುರುವಾಯ್ತಾ ಡಿ.ಕೆ. ಶಿವಕುಮಾರ್ - ರೇವಣ್ಣ ಮುನಿಸು..?

ಸಾರಾಂಶ

ಸಚಿವ ಡಿ.ಕೆ. ಶಿವಕುಮಾರ ಮತ್ತು ನಾನು ಚೆನ್ನಾಗಿದ್ದೇವೆ. ಸುಮ್ಮನೆ ನಮ್ಮ ನಡುವೆ ಜಗಳ ತಂದಿಡುವ ಕೆಲಸ ನಡೆಯುತ್ತಿದೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಅಸಮಾಧಾನ ವ್ಯಕ್ತಪಡಿಸಿದರು. 

ಬೆಂಗಳೂರು :  ಸಚಿವ ಡಿ.ಕೆ. ಶಿವಕುಮಾರ ಮತ್ತು ನಾನು ಚೆನ್ನಾಗಿದ್ದೇವೆ. ಸುಮ್ಮನೆ ನಮ್ಮ ನಡುವೆ ಜಗಳ ತಂದಿಡುವ ಕೆಲಸ ನಡೆಯುತ್ತಿದೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಅಸಮಾಧಾನ ವ್ಯಕ್ತಪಡಿಸಿದರು. 

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುವಾಗ ಡಿಕೆಶಿಗೆ ಸೇರಿದ ನೀರಾವರಿ ಇಲಾಖೆಯ ವರ್ಗಾವರ್ಗಿಯಲ್ಲಿ ರೇವಣ್ಣ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಆರೋಪಗಳಿಗೆ ಈ ರೀತಿ ಉತ್ತರಿಸಿದದರು. ನಮ್ಮದೇನಿದ್ದರೂ ರಸ್ತೆ ಗುಂಡಿ ಮುಚ್ಚುವುದು ಮತ್ತು ಮಳೆ ಹಾನಿಗೆ ಪರಿಹಾರ ನೀಡುವ ಕೆಲಸ ಮಾತ್ರ ಎಂದೂ ಅವರು ಲಘು ಧಾಟಿಯಲ್ಲಿ ಹೇಳಿದರು.

ನಾನು ಲೋಕೋಪಯೋಗಿ ಸಚಿವನಾಗಿ ಆ ಇಲಾಖೆ ಕೆಲಸ ಮಾತ್ರ ಮಾಡುತ್ತಿದ್ದೇನೆ. ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಕೆಲಸ ಬಿಟ್ಟು ಬೇರೇನೂ ಮಾಡಿಲ್ಲ. ನೀರಾವರಿ ಇಲಾಖೆಯಲ್ಲಿ ನಾನು ಯಾವುದೇ ರೀತಿಯ ಹಸ್ತಕ್ಷೇಪ ಮಾಡಿಲ್ಲ. ಈ ಕುರಿತು ಕಾಂಗ್ರೆಸ್ ಅಧ್ಯಕ್ಷರಿಗೆ ಬಹಿರಂಗವಾಗಿ ಹೇಳಿದ್ದೇನೆ. ಹಸ್ತಕ್ಷೇಪ ಮಾಡಿದ್ದೇನೆಂದು ಕಾಂಗ್ರೆಸ್ ಅಧ್ಯಕ್ಷರು ಕೇಳಿದರೆ ಅದಕ್ಕೆ ತಕ್ಕ ಉತ್ತರ ಕೊಡುತ್ತೇನೆ. ಆರ್‌ಡಿಪಿಆರ್ ಇಲಾಖೆಗೆ ಅಧಿಕಾರಿಗಳನ್ನು ನಾನು ಕೊಟ್ಟಿದ್ದೇನೆ. ಪೋಸ್ಟಿಂಗ್ ಮಾಡಿಕೊಳ್ಳುವುದು ಅವರಿಗೆ ಬಿಟ್ಟದ್ದು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಹಸ್ಯ ಡಿನ್ನರ್ ಮೀಟಿಂಗ್‌ನಲ್ಲಿ 'ಅಹಿಂದ' ಮಾಸ್ಟರ್ ಪ್ಲಾನ್! ಸಿಎಂ ಕುರ್ಚಿ ಉಳಿಸಿಕೊಳ್ಳಲು ಬೆಳಗಾವಿಯಲ್ಲಿ ಹೊಸ ರಣತಂತ್ರ?
India News Live: ಅಣುವಲಯ ಇನ್ನು ಖಾಸಗಿಗೂ ಮುಕ್ತ : ‘ಶಾಂತಿ’ ಮಸೂದೆಗೆ ಅನುಮೋದನೆ