ಮಹಿಳಾ ದೌರ್ಜನ್ಯ ಎಸಗುವರಿಗೆ ಸರ್ಕಾರಿ ಸೌಲಭ್ಯ ಇಲ್ಲ

Published : Jul 13, 2018, 08:29 AM IST
ಮಹಿಳಾ ದೌರ್ಜನ್ಯ ಎಸಗುವರಿಗೆ ಸರ್ಕಾರಿ ಸೌಲಭ್ಯ ಇಲ್ಲ

ಸಾರಾಂಶ

ಮಹಿಳೆಯರ ಮೇಲೆ ದೌರ್ಜನ್ಯವೆಸಗಿದ ಪ್ರಕರಣಗಳಲ್ಲಿ ಯಾರ ವಿರುದ್ಧವಾದರೂ ಆರೋಪಪಟ್ಟಿದಾಖಲಾದರೆ, ಪಡಿತರವೊಂದನ್ನು ಹೊರತುಪಡಿಸಿ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ರದ್ದು ಮಾಡಲಾಗುತ್ತದೆ.

ಚಂಡೀಗಢ: ಮಹಿಳೆಯರ ಮೇಲೆ ದೌರ್ಜನ್ಯವೆಸಗಿದ ಪ್ರಕರಣಗಳಲ್ಲಿ ಯಾರ ವಿರುದ್ಧವಾದರೂ ಆರೋಪಪಟ್ಟಿದಾಖಲಾದರೆ, ಪಡಿತರವೊಂದನ್ನು ಹೊರತುಪಡಿಸಿ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ರದ್ದು ಮಾಡಲಾಗುವುದು ಎಂದು ಹರ್ಯಾಣ ಮುಖ್ಯಮಂತ್ರಿ ಮನೋಹರ ಲಾಲ್‌ ಖಟ್ಟರ್‌ ಗುರುವಾರ ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮಹಿಳೆಯರ ಮೇಲಿನ ಅಪರಾಧ ಪಕ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

ಕೋರ್ಟ್‌ನಲ್ಲಿ ಆರೋಪಿಗಳ ವಿಚಾರಣೆ ನಡೆದು ಅಂತಿಮ ತೀರ್ಪು ಹೊರಬೀಳುವವರೆಗೂ ಎಲ್ಲಾ ಸರ್ಕಾರಿ ಸೌಲಭ್ಯಗಳನ್ನು ಹಿಂಪಡೆಯಲಾಗುವುದು. ತಪ್ಪಿತಸ್ಥರು ಯಾರೇ ಆಗಿರಲಿ, ಪುರುಷ ಅಥವಾ ಮಹಿಳೆಯಾಗಿದ್ದರೂ ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಣವೀರ್ ನಟನೆಯ ಧುರಂಧರ್ ಸಿನಿಮಾದ ಕತೆ ಭಾರತೀಯ ಸೇನೆಯ ಹೀರೋ ಮೇಜರ್ ಮೋಹಿತ್ ಶರ್ಮಾ ಅವರದ್ದಾ?
ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?