ಉ.ಪ್ರ: ಮಹಾಮೈತ್ರಿ ವಿಚಾರ ತಳ್ಳಿಹಾಕಿದ ಮುಲಾಯಮ್ ಸಿಂಗ್

Published : Nov 10, 2016, 05:53 AM ISTUpdated : Apr 11, 2018, 01:10 PM IST
ಉ.ಪ್ರ: ಮಹಾಮೈತ್ರಿ ವಿಚಾರ ತಳ್ಳಿಹಾಕಿದ ಮುಲಾಯಮ್ ಸಿಂಗ್

ಸಾರಾಂಶ

ಸಮಾಜವಾದಿ ಪಕ್ಷವು ಯಾವುದೇ ರೀತಿಯ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದಿರುವ ಮುಲಾಯಮ್, ಇತರ ಪಕ್ಷಗಳು ಬಯಸಿದ್ದಲ್ಲಿ ಸಮಾಜವಾದಿ ಪಕ್ಷದೊಂದಿಗೆ ವಿಲೀನವಾಗಬಹುದು ಎಂದು ಅವರು ಹೇಳಿದ್ದಾರೆ.

ಲಕ್ನೋ (ನ.10): ಮುಂಬರುವ ವಿಧಾನಸಭಾ ಚುನಾವಣೆಗೆ ಸಮಾಜವಾದಿ ಪಕ್ಷವು ಯಾವುದೇ ‘ಮಹಾಮೈತ್ರಿ’ ಮಾಡಿಕೊಳ್ಳುವುದಿಲ್ಲವೆಂದು ಪಕ್ಷದ ವರಿಷ್ಠ ಮುಲಾಯಮ್ ಸಿಂಗ್ ಯಾದವ್ ಹೇಳಿದ್ದಾರೆ.

ಸಮಾಜವಾದಿ ಪಕ್ಷವು ಏಕಾಂಗಿಯಾಗಿ ಮುಂಬರುವ ಚುನಾವಣೆಯನ್ನು ಎದುರಿಸಲಿದೆ, ಸಮಾಜವಾದಿ ಪಕ್ಷವು ಯಾವುದೇ ರೀತಿಯ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದಿರುವ ಮುಲಾಯಮ್, ಇತರ ಪಕ್ಷಗಳು ಬಯಸಿದ್ದಲ್ಲಿ ಸಮಾಜವಾದಿ ಪಕ್ಷದೊಂದಿಗೆ ವಿಲೀನವಾಗಬಹುದು ಎಂದು ಅವರು ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ಲಕ್ನೋನಲ್ಲಿ ನಡೆದ ಸಮಾಜವಾದಿ ಪಕ್ಷದ ರಜತ ಮಹೋತ್ಸವದಲ್ಲಿ ಆರ್’ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್, ಜೆಡಿಯು ಮುಖಂಡ ಶರದ್ ಯಾದವ ಹಾಗೂ ಇನ್ನಿತರ ಪಕ್ಷಗಳ ನಾಯಕರ ಭಾಗವಹಿಸುವಿಕೆಯು, ಬಿಹಾರ ಮಾದರಿಯ ಮಹಾಮೈತ್ರಿ ರಚನೆಯಾಗುವ ಬಗ್ಗೆ ಊಹಾಪೋಹಗಳನ್ನು ಸೃಷ್ಟಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ
ವೃದ್ಧೆಯ ಕೇರ್ ಟೇಕರ್‌ನಿಂದಲೇ ₹31 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಬಿಹಾರ ಮೂಲದ ಚಾಂದಿನಿ ಬಂಧನ!