ಅರ್ಧ ಹೆಲ್ಮೆಟ್ ಧರಿಸಿರುವವರಿಗೆ ಕಾದಿದೆ ಶಿಕ್ಷೆ! ಗೃಹ ಸಚಿವರಿಂದ ಖಡಕ್ ಆದೇಶ

Published : Jan 03, 2018, 04:52 PM ISTUpdated : Apr 11, 2018, 12:59 PM IST
ಅರ್ಧ ಹೆಲ್ಮೆಟ್ ಧರಿಸಿರುವವರಿಗೆ ಕಾದಿದೆ ಶಿಕ್ಷೆ! ಗೃಹ ಸಚಿವರಿಂದ ಖಡಕ್ ಆದೇಶ

ಸಾರಾಂಶ

ಕಾನೂನಿನ ಪ್ರಕಾರ, ಬಿಐಎಸ್ ಅಥವಾ ಐಎಸ್‌ಐ ಗುಣಮಟ್ಟದ ಹೆಲ್ಮೆಟ್ ಧರಿಸುವುದು ಕಡ್ಡಾಯ

ಬೆಂಗಳೂರಿನ ವಾಹನ ಸವಾರರು ಹಾಫ್ ಹೆಲ್ಮೆಟ್ ಧರಿಸಿದರೆ ದಂಡ ಬೆಂಗಳೂರಿನಲ್ಲಿ ದಂಡ ಹಾಕುವಂತೆ ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.

ದೂರವಾಣಿ ಮೂಲಕ ಅಧಿಕಾರಿಗಳಿಗೆ ಸೂಚನೆ ನೀಡಿರುವ ಅವರು 15 ದಿನಗಳ ನೋಟೀಸ್ ನೀಡಿ ದಂಡ ಹಾಕುವಂತೆ ಆದೇಶಿಸಿದ್ದಾರೆ. ಈ ಪ್ರಕ್ರಿಯೆ ಮೈಸೂರಿನಲ್ಲೂ ಜಾರಿಯಲ್ಲಿದ್ದು ನಗರದಲ್ಲೂ ಶೀಘ್ರದಲ್ಲಿ ಜಾರಿಗೆ ಬರಲಿದೆ.

ಮೈಸೂರಿನಲ್ಲಿ ಭಾರಿ ತಲೆ ದಂಡ

ಬಿಐಎಸ್ ಮತ್ತು ಐಎಸ್‌ಐ ಗುಣಮಟ್ಟ ಹೊಂದಿರದ ಹಾಗೂ ಅರ್ಧ ಹೆಲ್ಮೆಟ್‌ಗಳ ವಿರುದ್ಧ ಮಂಗಳವಾರ ಭಾರಿ ಕಾರ್ಯಾಚರಣೆ ನಡೆಸಿರುವ ಮೈಸೂರು ನಗರ ಸಂಚಾರ ಪೊಲೀಸರು ಬೈಕ್ ಸವಾರರು ಮತ್ತು ಹಿಂಬದಿ ಸವಾರರಿಂದ ಹದಿನೈದು ಸಾವಿರಕ್ಕೂ ಹೆಚ್ಚು ಹೆಲ್ಮೆಟ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಕಾನೂನಿನ ಪ್ರಕಾರ, ಬಿಐಎಸ್ ಅಥವಾ ಐಎಸ್‌ಐ ಗುಣಮಟ್ಟದ ಹೆಲ್ಮೆಟ್ ಧರಿಸುವುದು ಕಡ್ಡಾಯ.

ಈ ಬಗ್ಗೆ ಜಾಗೃತಿ ಮೂಡಿಸಿದ್ದರೂ, ಅಸುರಕ್ಷಿತ ಅರ್ಧ ಹೆಲ್ಮೆಟ್‌ಗಳನ್ನು ಬಳಸುತ್ತಿದ್ದುದು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ ನಗರ ಪೊಲೀಸರು ‘ಆಪರೇಷನ್ ಸೇಫ್ ರೈಡ್’ ಹೆಸರಿನಡಿ ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಬೈಕ್ ಸವಾರರು ಧರಿಸುತ್ತಿದ್ದ ಕಳಪೆ ಗುಣಮಟ್ಟದ 15,501 ಹೆಲ್ಮೆಟ್ ಗಳನ್ನು ವಶಕ್ಕೆ ಪಡೆದಿದ್ದಾರೆ.

ತಂದು ತೋರಿಸಿದ ಮೇಲೆಯೇ ಬಿಟ್ಟರು

ಮಧ್ಯಾಹ್ನದವರೆಗಿನ ಕಾರ್ಯಾಚರಣೆಯಲ್ಲಿ ಹೆಲ್ಮೆಟ್‌ಗಳನ್ನು ವಶಕ್ಕೆ ಪಡೆದಿದ್ದಷ್ಟೇ ಅಲ್ಲ, ಆ ಹೆಲ್ಮೆಟ್‌ಗಳ ಮೇಲೆ ಸವಾರರ ಬೈಕ್ ಮತ್ತು ಮೊಬೈಲ್ ಸಂಖ್ಯೆ ನಮೂದಿಸಿಕೊಂಡು ಸ್ಥಳದಲ್ಲೇ ಐಎಸ್‌ಐ ಅಥವಾ ಬಿಐಎಸ್ ಮುದ್ರೆ ಇರುವ ಹೆಲ್ಮೆಟ್ ತರುವಂತೆ ಪೊಲೀಸರು ಸೂಚಿಸಿದರು. ಅಂತಹ ಹೆಲ್ಮೆಟ್ ತಂದು ತೋರಿಸಿದ ಸವಾರರಿಗೆ ಮಾತ್ರ ಹಳೆಯ ಹೆಲ್ಮೆಟ್‌ಗಳನ್ನು ಹಿಂದಿರುಗಿಸಿದರು. ಇದರಿಂದಾಗಿ ನಗರದ ಹೆಲ್ಮೆಟ್ ಅಂಗಡಿಗಳ ಮುಂದೆ ಜನ ಮುಗಿಬಿದ್ದು, ಹೆಲ್ಮೆಟ್‌ಗಳು ಕಜ್ಜಾಯದಂತೆ ಮಾರಾಟವಾದವು.

ಮತ್ತೊಂದೆಡೆ ಕೃಷ್ಣರಾಜ ವಿಭಾಗದಲ್ಲಿ ಮಾತ್ರ ಪೊಲೀಸರು ಕಾರ್ಯಾಚರಣೆ ನಡೆಸದಿದ್ದಕ್ಕೆ ಸಾರ್ವಜನಿಕರಿಂದ ವ್ಯಾಪಕ ಟೀಕೆ ವ್ಯಕ್ತವಾಯಿತು. ಕಳೆದ ವರ್ಷ ಕಳಪೆ ಹೆಲ್ಮೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿದ್ದ ಪೊಲೀಸರು 1,390 ಹೆಲ್ಮೆಟ್‌ಗಳನ್ನು ವಶಪಡೆದಿದ್ದರು. ‘ಇನ್ನು ಮುಂದೆಯೂ ಕಾರ್ಯಾಚರಣೆ ಮುಂದುವರೆಯಲಿದ್ದು, ಕಳಪೆ ಹೆಲ್ಮೆಟ್ ಬಳಸುವ ಸವಾರರು ಹಾಗೂ ಮಾರಾಟಗಾರರ ಮೇಲೆ ದಾಳಿ ನಡೆಸಿ ವಶಕ್ಕೆ ಪಡೆಯಲಾಗುವುದು’ ಎಂದು ನಗರ ಪೊಲೀಸ್ ಆಯುಕ್ತ ಡಾ.ಎ. ಸುಬ್ರಮಣ್ಯೇಶ್ವರ ರಾವ್ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಮಾನದ ಬಾಲಕ್ಕೆ ಪ್ಯಾರಾಚೂಟ್ ಸಿಲುಕಿ15,000 ಅಡಿ ಎತ್ತರದಲ್ಲಿ ನೇತಾಡಿದ ಸ್ಕೈಡೈವರ್ ಬದುಕುಳಿದಿದ್ದು ಹೇಗೆ? ವೀಡಿಯೋ
ಮಲ್ಲಿಕಾರ್ಜುನ ಖರ್ಗೆ ಹಠಾವೋ ಪ್ರಿಯಾಂಕಾ ಗಾಂಧಿ ಲಾವೋ, ಕಾಂಗ್ರೆಸ್ ಅಧ್ಯಕ್ಷ ಬದಲಾವಣೆಗೆ ಹೋರಾಟ