
ಹಾಸನ (ಡಿ.23): ಮಹದಾಯಿ ಕುಡಿಯುವ ನೀರು ಹಂಚಿಕೆ ವಿಷಯದಲ್ಲಿ ಕೇವಲ ಸಭೆ ನಡೆಸುವುದರಿಂದ ಪ್ರಯೋಜನವಾಗದು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಅವರು ಮಾತನಾಡಿ, ‘ಕರ್ನಾಟಕಕ್ಕೆ ಎಷ್ಟು ಕುಡಿಯುವ ನೀರು ಕೊಡಬೇಕು ಎಂಬುದು ನ್ಯಾಯಾಧಿಕರಣದ ಮುಂದೆಯೇ ತೀರ್ಮಾನವಾಗಬೇಕು ಎಂಬ ಗೋವಾ ಸಿಎಂ ಹೇಳಿಕೆಗೆ ನನ್ನ ಸಹಮತವೂ ಇದೆ.
ಆದರೆ ನಾವೇ ಯಾವುದೇ ತೀರ್ಮಾನ ಮಾಡಲು ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅವರ ಅಭಿಪ್ರಾಯದಂತೆ ನ್ಯಾಯಾಧಿಕರಣ ನೀರು ಹಂಚಿಕೆ ನಿಗದಿ ಮಾಡಿದ ನಂತರವೂ ಚರ್ಚೆಗೆ ಗ್ರಾಸವಾಗಲಿದೆ. ಹೀಗಾಗಿ ಇದು ಬಗೆಹರಿಯದ ಸಮಸ್ಯೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.