
ಬೆಂಗಳೂರು(ಮಾ.19): ನಗರದ ಮಹಿಳೆಯರ ಪ್ರಮುಖ ಕಾಲೇಜಾಗಿರುವ ಮಹಾರಾಣಿ ಕಾಲೇಜಿನಲ್ಲಿ ಇನ್ಮುಂದೆ ಪುರುಷರಿಗೆ ಪ್ರವೇಶವಿಲ್ಲ. ಇದೇನಿದು ಇದು ಮಾಮೂಲಿ ವಿಷಯವಲ್ಲವೆ ಎಂದು ನೀವು ಹೇಳಬಹುದು.
ಆದರೆ ಹೊಸ ವಿಷಯವೇನೆಂದರೆ ಇನ್ಮುಂದೆ ಈ ಕಾಲೇಜಿನಲ್ಲಿ ಉಪನ್ಯಾಸಕರು ಕೂಡ ಮಹಿಳೆಯರೆ. ನಿನ್ನೆಯಷ್ಟೆ ಸುವರ್ಣ ನ್ಯೂಸ್ ಉಪನ್ಯಾಸಕನೊಬ್ಬ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನೀಡಿರುವ ಬಗ್ಗೆ ವರದಿ ಪ್ರಸಾರ ಮಾಡಿತ್ತು. ಈ ಘಟನೆಯಿಂದ ಎಚ್ಚೆತ್ತುಕೊಂಡ ಕಾಲೇಜು ಶಿಕ್ಷಣ ಇಲಾಖೆ 2017-18 ನೇ ಸಾಲಿನ ಶೈಕ್ಷಣಿಕ ವರ್ಷದಿಂದ ನೂತನ ನಿಯಮ ಜಾರಿಗೊಳಿಸಲಿದೆ. ಈ ನಿಯಮದ ಪ್ರಕಾರ ಬೋಧಕವರ್ಗ, ಬೋಧಕೇತರ ವರ್ಗದಲ್ಲಿರುವ ಎಲ್ಲ ಪುರುಷ ಸಿಬ್ಬಂದಿಗೆ ಕೊಕ್ ನೀಡಿ ಮಹಿಳೆಯರನ್ನೇ ನೇಮಿಸಿಕೊಳ್ಳುವ ಮಹತ್ವದ ನಿರ್ಧಾರ ಕೈಗೊಳ್ಳಲಿದೆ.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.